Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:28 - ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:28
14 ತಿಳಿವುಗಳ ಹೋಲಿಕೆ  

ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.


ಹೀಗಿರುವುದರಿಂದ ಈಗ ಒಂದೇ ಸಾರಿ ಮಾತ್ರ ನನ್ನ ಪಾಪವನ್ನು ಕ್ಷಮಿಸಬೇಕು. ಈ ಮರಣಕರವಾದ ಉಪದ್ರವವನ್ನು ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಿರಿ,” ಎಂದನು.


ಅದಕ್ಕೆ ಫರೋಹನು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರಿಗೆ ಮರುಭೂಮಿಯಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿಸುತ್ತೇನೆ. ಆದರೆ ದೂರ ಹೋಗಬೇಡಿರಿ, ನನಗೋಸ್ಕರ ಪ್ರಾರ್ಥನೆಮಾಡಿರಿ,” ಎಂದನು.


ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.


ಯೆಹೋವ ದೇವರು ಮೋಶೆಗೆ, “ಇನ್ನು ಒಂದೇ ಉಪದ್ರವವನ್ನು ಫರೋಹನ ಮೇಲೆಯೂ, ಈಜಿಪ್ಟ್ ಮೇಲೆಯೂ ಬರಮಾಡುವೆನು. ಆಮೇಲೆ ಅವನು ಇಲ್ಲಿಂದ ಕಳುಹಿಸುವನು. ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲರನ್ನೂ ಕಳುಹಿಸಿಬಿಡುವನು.


ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ,” ಎಂದನು.


ಆದುದರಿಂದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಯಿಸಿ ಅವರಿಗೆ, “ನೀವು ಹೋಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಆದರೆ ಹೋಗುವವರು ಯಾರ‍್ಯಾರು?” ಎಂದು ಕೇಳಿದನು.


ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, “ನೀವು ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ. ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಡದಿ ಮಕ್ಕಳೂ ನಿಮ್ಮ ಸಂಗಡ ಹೋಗಲಿ,” ಎಂದನು.


ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು.


ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು.


“ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು.


ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಅಧಿಕಾರಿಗಳ ಮೇಲೆಯೂ ಕಪ್ಪೆಗಳು ಏರಿ ಬರುವುವು,’ ಎಂದು ಹೇಳು,” ಎಂದರು.


ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು