Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:29 - ಕನ್ನಡ ಸಮಕಾಲಿಕ ಅನುವಾದ

29 ಮೋಶೆಯು ಅವನಿಗೆ, “ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೇ, ಯೆಹೋವ ದೇವರ ಕಡೆಗೆ ನನ್ನ ಕೈಗಳನ್ನು ಚಾಚಿ ಪ್ರಾರ್ಥಿಸುವೆನು. ಭೂಮಿಯು ಯೆಹೋವ ದೇವರದೇ ಎಂದು ನೀನು ತಿಳಿದುಕೊಳ್ಳುವಂತೆ ಗುಡುಗುಗಳು ನಿಂತುಹೋಗುವುವು. ಆಲಿಕಲ್ಲಿನ ಮಳೆಯು ಇನ್ನು ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ಮೋಶೆ - ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈ ಎತ್ತಿ ಯೆಹೋವನನ್ನು ಪ್ರಾರ್ಥಿಸುವೆನು; ಆಗ ಗುಡುಗೂ ಕಲ್ಲಿನ ಮಳೆಯೂ ನಿಂತುಹೋಗುವವು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧಿಕಾರದೊಳಗೆ ಇದೆ ಎಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅಧೀನದಲ್ಲಿದೆಯೆಂದು ಆಗ ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:29
19 ತಿಳಿವುಗಳ ಹೋಲಿಕೆ  

ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.”


ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!


ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.


ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತನ್ನ ಹೃದಯದ ವೇದನೆಯಿಂದ, ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,


ಆಗ ಸೊಲೊಮೋನನು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಯೆಹೋವ ದೇವರ ಬಲಿಪೀಠದ ಮುಂದೆ ನಿಂತು, ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,


ಆಕಾಶವೂ ಉನ್ನತಾಕಾಶವೂ ಭೂಮಿಯೂ ಅದರಲ್ಲಿರುವಂಥಾದ್ದೆಲ್ಲವೂ ನಿಮ್ಮ ದೇವರಾಗಿರುವ ಯೆಹೋವ ದೇವರವುಗಳೇ.


ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.


ಯೆಹೋವ ದೇವರು ಆಕಾಶದಲ್ಲಿಯೂ, ಭೂಮಿಯಲ್ಲಿಯೂ, ಸಮುದ್ರದಲ್ಲಿಯೂ, ಎಲ್ಲಾ ಅಗಾಧಗಳಲ್ಲಿಯೂ ತಾವು ಅಪೇಕ್ಷಿಸುವುದನ್ನೆಲ್ಲಾ ಮಾಡುತ್ತಾರೆ.


ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ, ಏಕೆಂದರೆ ಭೂಲೋಕವೂ ಅದರಲ್ಲಿರುವುದೆಲ್ಲವೂ ನನ್ನವೇ.


“ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ, ನಿನ್ನ ಕೈಗಳನ್ನು ದೇವರ ಕಡೆಗೆ ಚಾಚಿ,


ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ,


ಆದ್ದರಿಂದ ಈಗ ನೀವು ನನ್ನ ಮಾತನ್ನು ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿದರೆ, ಸಮಸ್ತ ಜನರಲ್ಲಿ ನೀವು ನನ್ನ ಸಂಗ್ರಹಿಸಿದ ಸೊತ್ತಾಗಿರುವಿರಿ. ಏಕೆಂದರೆ ಭೂಮಿಯೆಲ್ಲಾ ನನ್ನದೇ.


ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದಾಗ, ತನ್ನ ಕೈಗಳನ್ನು ಯೆಹೋವ ದೇವರ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆಲಿಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.


“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.


ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.


ಆರೋನನು ಈಜಿಪ್ಟಿನ ನೀರಿನ ಮೇಲೆ ಕೈಚಾಚಿದಾಗ, ಕಪ್ಪೆಗಳು ಏರಿಬಂದು ಈಜಿಪ್ಟ್ ದೇಶವನ್ನು ಮುತ್ತಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು