Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಇಸ್ರಾಯೇಲರ ಪಶುಗಳನ್ನೂ ಈಜಿಪ್ಟಿನವರ ಪಶುಗಳನ್ನೂ ವಿಂಗಡಿಸುವರು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯುವುದಿಲ್ಲ,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಸ್ರಾಯೇಲರ ಪಶುಗಳಿಗೂ, ಐಗುಪ್ತರ ಪಶುಗಳಿಗೂ ವ್ಯತ್ಯಾಸವನ್ನುಂಟು ಮಾಡುವನು. ಇಸ್ರಾಯೇಲರಿಗಿರುವ ಪಶುಗಳಲ್ಲಿ ಒಂದೂ ಸಾಯುವುದಿಲ್ಲ’ ಎಂದು ಹೇಳಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಸ್ರಯೇಲರ ಪಶುಪ್ರಾಣಿಗಳಿಗೂ ಈಜಿಪ್ಟಿನವರ ಪಶುಪ್ರಾಣಿಗಳಿಗೂ ಆತನು ವ್ಯತ್ಯಾಸಮಾಡುವನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯುವುದಿಲ್ಲವೆಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ಪಶುಗಳಿಗೂ ಐಗುಪ್ತ್ಯರ ಪಶುಗಳಿಗೂ ಆತನು ವ್ಯತ್ಯಾಸ ಮಾಡುವನು; ಇಸ್ರಾಯೇಲ್ಯರಿಗಿರುವ ಪಶುಗಳಲ್ಲಿ ಒಂದೂ ಸಾಯುವದಿಲ್ಲವೆಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಇಸ್ರೇಲರ ಪಶುಗಳಿಗೂ ಈಜಿಪ್ಟಿನವರ ಪಶುಗಳಿಗೂ ವ್ಯತ್ಯಾಸ ಮಾಡುವೆನು. ಇಸ್ರೇಲರ ಯಾವ ಪಶುವೂ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:4
10 ತಿಳಿವುಗಳ ಹೋಲಿಕೆ  

“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.


ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ, ನಿಮ್ಮನ್ನು ದಾಟಿಹೋಗುವೆನು. ಈಜಿಪ್ಟ್ ದೇಶವನ್ನು ನಾನು ಸಂಹರಿಸುವ ಸಮಯದಲ್ಲಿ, ನಿಮ್ಮನ್ನು ನಾಶಮಾಡುವ ಯಾವ ಉಪದ್ರವವು ನಿಮ್ಮ ಮೇಲೆ ಬರುವುದಿಲ್ಲ.


ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾರೂ ತಮ್ಮ ಸ್ಥಳವನ್ನು ಬಿಟ್ಟು ಏಳಲಿಲ್ಲ. ಆದರೆ ಇಸ್ರಾಯೇಲರಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.


ಇದಲ್ಲದೆ ಯೆಹೋವ ದೇವರು, “ನಿರ್ದಿಷ್ಟವಾದ ಒಂದು ಸಮಯವನ್ನು ನೇಮಿಸಿ, ನಾಳೆ ಯೆಹೋವ ದೇವರು ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವರು, ಎಂದು ಹೇಳು,” ಎಂದರು.


ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಇಸ್ರಾಯೇಲರು ಇದ್ದ ಗೋಷೆನ್ ಪ್ರಾಂತದಲ್ಲಿ ಆಲಿಕಲ್ಲಿನ ಮಳೆಯು ಇರಲಿಲ್ಲ.


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು