Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:22 - ಕನ್ನಡ ಸಮಕಾಲಿಕ ಅನುವಾದ

22 ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಅನೇಕ ಅರಸರನ್ನೂ ದೇಶಗಳನ್ನೂ ಕೆಡವಿಹಾಕುವೆನು; ಆ ಅನ್ಯ ಜನರ ಬಲಿಷ್ಠ ಸಾಮ್ರಾಜ್ಯಗಳನ್ನು ನಾಶಮಾಡುವೆನು. ಅವರ ರಥಗಳನ್ನೂ ರಾಹುತರನ್ನೂ ನಾಶಮಾಡುವೆನು. ಅವರ ಯುದ್ಧದ ಕುದುರೆಗಳನ್ನೂ ಸವಾರರನ್ನೂ ಸೋಲಿಸುವೆನು. ಆ ಸೈನ್ಯಗಳವರು ಈಗ ಸ್ನೇಹಿತರಾಗಿದ್ದರೂ ಒಬ್ಬರಿಗೊಬ್ಬರು ವೈರಿಗಳಾಗಿ ಒಬ್ಬರನ್ನೊಬ್ಬರು ಖಡ್ಗಗಳಿಂದ ಕೊಲ್ಲುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:22
38 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೀಗೆ ಘೋಷಿಸುತ್ತಾರೆ: “ಆ ದಿವಸದಲ್ಲಿ, ನಾನು ನಿನ್ನ ಮಧ್ಯದೊಳಗಿರುವ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.


ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.


ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.


ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.


ನನಗೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿಗೆ ಮುಯ್ಯಿತೀರಿಸುವೆನು.”


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ.


ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.


ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.


ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.


ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’


ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು. ಆ ಜನಾಂಗಗಳು ಸಂಪೂರ್ಣವಾಗಿ ಹಾಳಾಗುವುವು.


ಇದಲ್ಲದೆ ನಾನು ಈಜಿಪ್ಟಿನವನಿಗೆ ವಿರೋಧವಾಗಿ ಈಜಿಪ್ಟಿನವನನ್ನು ಎಬ್ಬಿಸುವೆನು. ಸಹೋದರನಿಗೆ ವಿರುದ್ಧವಾಗಿ ಸಹೋದರನೂ, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೊರಾಡುವವು.


ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.


ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ಕಂಡಾಗ, ಆ ಗುಂಪಿನವರು ಕರಗಿ ಹೋಗುತ್ತಾ, ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.


ಫರೋಹನ ಕುದುರೆಗಳು ಅವನ ರಥಗಳ ಮತ್ತು ಸವಾರರ ಸಂಗಡ ಸಮುದ್ರದೊಳಗೆ ಬಂದಾಗ, ಯೆಹೋವ ದೇವರು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿದರು. ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿನ ಒಣನೆಲದ ಮೇಲೆ ದಾಟಿಹೋದರು.


ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು.


ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.


ಅವರು ಫರೋಹನ ರಥಗಳನ್ನೂ, ಅವನ ಸ್ಯೆನ್ಯವನ್ನೂ ಸಮುದ್ರದಲ್ಲಿ ಅಲ್ಲಾಡಿಸಿ ಎಸೆದಿದ್ದಾರೆ. ಫರೋಹನ ಅತ್ಯುತ್ತಮ ಅಧಿಕಾರಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿ ಹೋದರು.


ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.


ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.


ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಖಡ್ಗವನ್ನು ಕರೆಯುವೆನೆಂದೂ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರತಿಯೊಬ್ಬ ಮನುಷ್ಯನ ಖಡ್ಗವೂ ಅವನ ಸಹೋದರನಿಗೆ ವಿರೋಧವಾಗಿರುವುದು.


ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. ಪಾದತ್ವರಿತನು ತಪ್ಪಿಸಿಕೊಳ್ಳನು. ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.


ಜನಾಂಗಗಳು ನೋಡಿ ನಾಚಿಕೊಳ್ಳುವರು ತಮ್ಮ ತಮ್ಮ ಶಕ್ತಿಗೆ ವಂಚಿತರಾಗಿ ನಾಚಿಕೆಪಡುವರು. ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವುವು.


ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.


ಜನಾಂಗವು ಜನಾಂಗದಿಂದಲೂ, ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ದೇವರು ಸಕಲ ಇಕ್ಕಟ್ಟುಗಳಿಂದ ಅವರನ್ನು ತೊಂದರೆಪಡಿಸಿದರು.


ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತವಾಗಿರುವುದು. ನಿನ್ನ ಶತ್ರುಗಳೆಲ್ಲರು ನಾಶಹೊಂದುವರು.


ಆ ದಿವಸದಲ್ಲಿ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶಮಾಡುವುದಕ್ಕೆ ನಾನು ಹುಡುಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು