Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:23 - ಕನ್ನಡ ಸಮಕಾಲಿಕ ಅನುವಾದ

23 “ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಶೆಯಲ್ತೀಯೇಲನ ಮಗನೂ ನನ್ನ ಸೇವಕನೂ ಆದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವಾಗಿ ಮಾಡಿಕೊಳ್ಳುವೆನು, ಇದಕ್ಕೆ ನಿನ್ನನ್ನು ಆರಿಸಿಕೊಂಡಿದ್ದೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವೆ.” ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:23
12 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,


ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು.


ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.


ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.


ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು