Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:13 - ಕನ್ನಡ ಸಮಕಾಲಿಕ ಅನುವಾದ

13 ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? ದುಷ್ಟನು ತನಗಿಂತ ನೀತಿವಂತನನ್ನು ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:13
37 ತಿಳಿವುಗಳ ಹೋಲಿಕೆ  

ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.


ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು.


ಹಾಗಾದರೆ, ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನಿರ್ದೋಷಿಯನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲ್ಲಿಸುವೆನು. ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾರಣೆ ಮಾಡಿ, ನಿಮ್ಮನ್ನು ಭೂಮಿಯಿಂದ ತೆಗೆದುಬಿಡುವೆನು,” ಎಂದನು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಇವು ಹೀಗಿರಲಾಗಿ ಯೆಹೋವ ದೇವರೇ, ನೀವು ಹಿಂಜರಿಯುತ್ತೀರೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿರೋ?


ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ದೇವರೇ, ಮೌನವಾಗಿರಬೇಡಿರಿ. ನಮ್ಮ ಕೂಗಿಗೆ ನಿಮ್ಮ ಪ್ರತಿಕ್ರಿಯೆ ನೀಡಿರಿ. ದೇವರೇ, ಸುಮ್ಮನಿರಬೇಡಿರಿ.


ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು.


ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.


ಯೆಹೋವ ದೇವರೇ, ನೀವು ಇದನ್ನು ನೋಡಿದ್ದೀರಿ; ಯೆಹೋವ ದೇವರೇ, ಮೌನವಾಗಿರಬೇಡಿರಿ; ನನಗೆ ದೂರವಾಗಿರಲೂ ಬೇಡಿರಿ.


ದೇವರು ತಮ್ಮ ಪರಿಶುದ್ಧರನ್ನು ಆತುಕೊಂಡಿರುವುದಿಲ್ಲ; ಆಕಾಶಗಳೂ ದೇವರ ದೃಷ್ಟಿಯಲ್ಲಿ ಶುದ್ಧವಲ್ಲ.


ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.


ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.


ದುಷ್ಟರು ವೃದ್ಧರಾಗುವವರೆಗೆ ಏಕೆ ಬದುಕುತ್ತಾರೆ? ಅಂಥವರು ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು?


ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ. ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.


ನಿಮ್ಮನ್ನು ನಿರೀಕ್ಷಿಸುವವರಲ್ಲಿ ಯಾರೂ ನಾಚಿಕೆಪಡದಿರಲಿ; ನಿಷ್ಕಾರಣವಾಗಿ ವಂಚನೆ ಮಾಡುವವರು ನಾಚಿಕೆಪಡಲಿ.


ಯೆಹೋವ ದೇವರೇ, ಎಷ್ಟರವರೆಗೆ ನೀವು ಸುಮ್ಮನೆ ನೋಡುತ್ತಾ ಇರುವಿರಿ? ಅವರ ಅಪಾಯಗಳಿಂದ ನನ್ನ ಪ್ರಾಣವನ್ನು ಬಿಡಿಸಿರಿ. ಆ ಸಿಂಹಗಳಿಂದ ನನ್ನ ಅಮೂಲ್ಯ ಪ್ರಾಣವನ್ನೂ ತಪ್ಪಿಸಿರಿ.


ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ.


ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”


ಮನುಷ್ಯನನ್ನು ಅವನ ಜಗಳದಲ್ಲಿ ಅನ್ಯಾಯವಾಗಿ ತೀರಿಸುವುದು ಕರ್ತದೇವರು ಮೆಚ್ಚುವುದಿಲ್ಲ.


ಮನುಷ್ಯರನ್ನು ಸಮುದ್ರದ ಮೀನುಗಳಂತೆಯೂ, ಆಳುವವನಿಲ್ಲದ ಕ್ರಿಮಿಗಳಂತೆಯೂ ಮಾಡಿರುತ್ತೀರಿ.


ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ತನ್ನ ಯಜಮಾನನನ್ನು ಬಿಟ್ಟು, ನಿನ್ನ ಬಳಿಗೆ ತಪ್ಪಿಸಿಕೊಂಡು ಬಂದ ದಾಸನನ್ನು ಹಿಡಿದು ಯಜಮಾನನಿಗೆ ಒಪ್ಪಿಸಬಾರದು.


ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು