Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:15 - ಕನ್ನಡ ಸಮಕಾಲಿಕ ಅನುವಾದ

15 ದುಷ್ಟ ವೈರಿಯು ಅವುಗಳನ್ನು ಗಾಳದಿಂದ ಎತ್ತಿ, ತನ್ನ ಬಲೆಯಿಂದ ಅವುಗಳನ್ನು ಹಿಡಿದು, ತನ್ನ ಜಾಲದಿಂದ ಅವುಗಳನ್ನು ಕೂಡಿಸಿಡುತ್ತಾನೆ. ಅವನು ಹಿಗ್ಗುತ್ತಾನೆ, ಸಂತೋಷಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ಅವರನ್ನೆಲ್ಲಾ ತನ್ನ ಗಾಳದಿಂದ ಮೇಲಕ್ಕೆಳೆಯುತ್ತಾನೆ, ತನ್ನ ಬಲೆಯಿಂದ ಬಾಚುತ್ತಾನೆ, ತನ್ನ ಜಾಲದಲ್ಲಿ ಗುಡ್ಡೆ ಮಾಡುತ್ತಾನೆ; ಇದಕ್ಕೆ ಹಿಗ್ಗುತ್ತಾನೆ, ಹೆಚ್ಚಳಪಡುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:15
18 ತಿಳಿವುಗಳ ಹೋಲಿಕೆ  

“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು. ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು. ಎಂದು ಸಾರ್ವಭೌಮ ಯೆಹೋವ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.


“ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.


ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ; ಅಸಹಾಯಕರನ್ನು ಹಿಡಿಯಲು ಕಾಯುತ್ತಾನೆ ಕುಗ್ಗಿದವನನ್ನು ಹಿಡಿದೆಳೆದು ತನ್ನ ಬಲೆಯಲ್ಲಿ ಹಾಕುತ್ತಾನೆ.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.


ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ”


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,


“ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ, ನೀವು ಉಲ್ಲಾಸಿಸಿದ್ದರಿಂದಲೂ, ಕೊಬ್ಬಿದ ಕಡಸಿನ ಹಾಗೆ ಗರ್ವ ಪಟ್ಟದ್ದರಿಂದಲೂ, ಗಂಡು ಕುದುರೆಗಳ ಹಾಗೆ ಹೂಂಕರಿಸಿದ್ದರಿಂದಲೂ,


ಮೀನುಗಾರರು ಕೂಡ ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


“ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.


ಮನುಷ್ಯರನ್ನು ಸಮುದ್ರದ ಮೀನುಗಳಂತೆಯೂ, ಆಳುವವನಿಲ್ಲದ ಕ್ರಿಮಿಗಳಂತೆಯೂ ಮಾಡಿರುತ್ತೀರಿ.


ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು