Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:3 - ಕನ್ನಡ ಸಮಕಾಲಿಕ ಅನುವಾದ

3 ಅನ್ಯಾಯವನ್ನು ನಾನು ನೋಡುವಂತೆ ಏಕೆ ಮಾಡುತ್ತೀರಿ? ತಪ್ಪನ್ನು ಏಕೆ ಸಹಿಸುತ್ತೀರಿ? ನಾಶವೂ ಹಿಂಸೆಯೂ ನನ್ನ ಮುಂದೆ ಇವೆ. ಹೋರಾಟವೂ ಒಡುಕೂ ಹೆಚ್ಚುತ್ತಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕೇಡನ್ನು ನಾ ನೋಡುವಂತೆ ಮಾಡಿದೆಯೇಕೆ? ಕಷ್ಟವನ್ನು ನಾ ಕಾಣುವಂತೆ ಮಾಡಿದೆಯೇಕೆ? ಹಿಂಸೆಬಾಧೆಗಳು ಇವೆ ನನ್ನ ಕಣ್ಣ ಮುಂದೆ. ಇಗೋ, ಜಗಳ ನಡೆಯುತಿದೆ, ವ್ಯಾಜ್ಯವೇಳುತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕೇಡನ್ನು ನನ್ನ ಕಣ್ಣಿಗೆ ಏಕೆ ಬೀಳಿಸುತ್ತಿದ್ದೀ? ಕಷ್ಟವನ್ನೇಕೆ ನನಗೆ ತೋರಿಸುತ್ತಿದ್ದೀ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ, ವ್ಯಾಜ್ಯವೇಳುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:3
16 ತಿಳಿವುಗಳ ಹೋಲಿಕೆ  

ಏಕೆಂದರೆ, ನಾನು ಮಾತನಾಡುವವನಾದ್ದರಿಂದ ಬಲತ್ಕಾರವೂ, ಕೊಳ್ಳೆಯೂ ಎಂದು ಗಟ್ಟಿಯಾಗಿ ಕೂಗುತ್ತೇನೆ. ಆದ್ದರಿಂದ ಯೆಹೋವ ದೇವರ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ, ಗೇಲಿಗೂ ಗುರಿಮಾಡಿತು.


ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.


ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ, ಕೇಳುತ್ತಾ, ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ನಾನು ಕಷ್ಟವನ್ನೂ, ಚಿಂತೆಯನ್ನೂ ನೋಡುವುದಕ್ಕೂ, ನನ್ನ ದಿವಸಗಳು ನಾಚಿಕೆಯಲ್ಲಿ ಕಳೆದುಹೋಗುವುದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಏಕೆ?


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು