Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:14 - ಕನ್ನಡ ಸಮಕಾಲಿಕ ಅನುವಾದ

14 ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಮುದ್ರವು ನೀರಿನಿಂದ ತುಂಬಿ ಇರುವಂತೆ ಜಗವು ಸರ್ವೇಶ್ವರಸ್ವಾಮಿಯ ಮಹಿಮೆಯ ಜ್ಞಾನದಿಂದ ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಎಲ್ಲಾ ಕಡೆಗಳಲ್ಲಿರುವ ಜನರು ಯೆಹೋವನ ಮಹಿಮೆಯನ್ನು ತಿಳಿದುಕೊಳ್ಳುವರು. ಹೇಗೆ ನೀರು ಸಮುದ್ರಕ್ಕೆ ಹರಿಯುತ್ತದೋ ಹಾಗೆ ಈ ವರ್ತಮಾನವು ಎಲ್ಲಾ ಕಡೆಗೆ ಹಬ್ಬುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:14
19 ತಿಳಿವುಗಳ ಹೋಲಿಕೆ  

ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.


ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.


ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು ನಿಮ್ಮ ಮುಂದೆ ಅಡ್ಡಬಿದ್ದು, ನಿಮ್ಮ ಹೆಸರಿಗೆ ಮಹಿಮೆ ಸಲ್ಲಿಸುವರು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.


ಆಗ ಯೆಹೋವ ದೇವರ ಮಹಿಮೆಯು ಗೋಚರವಾಗುವುದು. ಮಾನವರೆಲ್ಲರೂ ಒಟ್ಟಿಗೆ ಅದನ್ನು ಕಾಣುವರು. ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.”


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”


ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂಥ ನದಿಯಾಗಿತ್ತು. ಏಕೆಂದರೆ ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.


ನನ್ನ ಜನರ ಸ್ತ್ರೀಯರನ್ನು ಅವರ ರಮ್ಯವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ. ಅವರ ಮಕ್ಕಳಿಂದ ನನ್ನ ಆಶೀರ್ವಾದವನ್ನು ಎಂದೆಂದಿಗೂ ತೆಗೆದಿದ್ದೀರಿ.


ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ, ನಿನ್ನ ನೆರೆಯವರಿಗೆ ಕುಡಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!


“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.


ಅವರು ನಿಮ್ಮ ಸಮಯಕ್ಕೆ ಖಚಿತವಾದ ಆಧಾರವಾಗುತ್ತಾರೆ. ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾಗಿಯೂ ಇರುವನು. ಯೆಹೋವ ದೇವರ ಭಯವೇ ಅವನ ಬೊಕ್ಕಸವಾಗಿರುವುದು.


ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು