Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:17 - ಕನ್ನಡ ಸಮಕಾಲಿಕ ಅನುವಾದ

17 ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಲೆಬನೋನಿಗೆ ಆದಂಥ ಹಿಂಸೆಗೆ ನೀನೂ ಒಳಗಾಗುವಿ, ಮೃಗಪಶುಗಳ ನಾಶನವು ನಿನ್ನನ್ನೂ ಹೆದರಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿರುವೆ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುವೆ. ಆ ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತುಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವೆ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:17
15 ತಿಳಿವುಗಳ ಹೋಲಿಕೆ  

ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.


ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


“ಬಾಬಿಲೋನಿನವರು ಮತ್ತು ಕಸ್ದೀಯರು ಚೀಯೋನಿನಲ್ಲಿ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ.


ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.


ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು ನಿನಗೆ ಸಲ್ಲಿಸುವವನು ಧನ್ಯನು.


“ಬಿಲ್ಲನ್ನು ಬಗ್ಗಿಸುವವರೇ, ಬಾಬಿಲೋನಿಗೆ ವಿರೋಧವಾಗಿ ಸುತ್ತಲೂ ಯುದ್ಧ ಸಿದ್ಧಮಾಡಿರಿ; ಅದಕ್ಕೆ ಎಸೆಯಿರಿ; ಬಾಣಗಳನ್ನು ಕಡಿಮೆ ಮಾಡಬೇಡಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿತಲ್ಲಾ.


ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.


ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.


ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.


ಹೀಗಿರುವುದರಿಂದ ನಿರಂತರವಾಗಿ ಅವರು ತಮ್ಮ ಬಲೆಯನ್ನು ಬರಿದುಮಾಡಿ, ಕರುಣೆ ಇಲ್ಲದೆ ಜನಾಂಗಗಳನ್ನು ನಾಶ ಮಾಡುತ್ತಾ ಅವನು ಹೋಗಬೇಕೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು