Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:18 - ಕನ್ನಡ ಸಮಕಾಲಿಕ ಅನುವಾದ

18 “ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ವಿಗ್ರಹ ಕೆತ್ತುವವನ ವಿಗ್ರಹವಾಗಲಿ ಅಥವಾ ಎರಕದಿಂದ ಮಾಡಿದ ಗೊಂಬೆಗಳಿಂದಾಗಲಿ ಲಾಭವೇನು? ಹಾಗೆ ದೇವರುಗಳನ್ನು ರೂಪಿಸುವವರು ಸುಳ್ಳನ್ನು ಬಿತ್ತುವವರು; ಏಕೆಂದರೆ, ಆ ನಿರ್ಜೀವ ವಿಗ್ರಹವನ್ನು ನಿರ್ಮಿಸಿದವನು ತನ್ನ ಕೈಕೆಲಸದ ಮೇಲೆಯೇ ಭರವಸೆ ಇಟ್ಟಿದ್ದಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೆತ್ತಿದ ವಿಗ್ರಹವು ಏತಕ್ಕೆ? ರೂಪಿಸಿದವನು ಅದನ್ನೇಕೆ ಕೆತ್ತಬೇಕಾಗಿತ್ತು? ಸುಳ್ಳುಕಣಿಗಾಗಿ ಇಟ್ಟುಕೊಂಡ ಎರಕದ ಬೊಂಬೆಯಿಂದ ಪ್ರಯೋಜನವೇನು? ನಿರ್ಮಿಸಿದವನು ತನ್ನ ಕೈಕೆಲಸದ ಮೂಗಬೊಂಬೆಯಲ್ಲಿ ನಂಬಿಕೆಯಿಡುವದಕ್ಕೆ ಏನಾಧಾರ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಮನುಷ್ಯನ ಸುಳ್ಳು ದೇವರು ಅವನಿಗೆ ಸಹಾಯ ಮಾಡಲಾರದು. ಯಾಕೆಂದರೆ ಅದು ಒಬ್ಬನು ಲೋಹದಿಂದ ಮಾಡಿದ ಕೇವಲ ವಿಗ್ರಹವಷ್ಟೆ. ಅದು ಕೇವಲ ಜಡಮೂರ್ತಿ. ಅದನ್ನು ಮಾಡಿದವನು, ಅದು ಅವನಿಗೆ ಸಹಾಯ ಮಾಡುವದೆಂದು ಯೋಚಿಸುವದು ಶುದ್ಧ ಮೂರ್ಖತನ. ಆ ಮೂರ್ತಿಯು ಮಾತಾಡುವೂದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:18
36 ತಿಳಿವುಗಳ ಹೋಲಿಕೆ  

ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.


ನೀವು ಕ್ರಿಸ್ತನನ್ನು ನಂಬದಿದ್ದಾಗ, ಹೇಗೆ ಮೂಕ ವಿಗ್ರಹಗಳ ಕಡೆಗೆ ಪ್ರಭಾವಗೊಂಡು ದಾರಿತಪ್ಪಿ ಹೋಗಿದ್ದಿರಿ ಎಂಬುದನ್ನು ಬಲ್ಲಿರಿ.


ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು. ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು. ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ. ವ್ಯರ್ಥವಾಗಿ ಆದರಿಸುತ್ತಾರೆ, ಆದ್ದರಿಂದ ಕುರಿಗಳಂತೆ ಚದರಿದ್ದಾರೆ, ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, ‘ನೀವೇ ನಮ್ಮ ದೇವರುಗಳು,’ ಎಂದು ಹೇಳುವವರು ಹಿಂದೆ ಬಿದ್ದು, ನಾಚಿಕೆಗೆ ಈಡಾಗುವರು.


ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.


“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”


ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.


ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!


ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ. ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.


ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ, ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸುವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.


ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ.


ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


“ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ; ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ; ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ; ಅವುಗಳಲ್ಲಿ ಉಸಿರೇ ಇಲ್ಲ.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.


ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರುಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡಿದನು. ಅವು ಮೀಕನ ಮನೆಯಲ್ಲಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು