Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:19 - ಕನ್ನಡ ಸಮಕಾಲಿಕ ಅನುವಾದ

19 ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮರಕ್ಕೆ ಎಚ್ಚತ್ತುಕೋ, ಜಡವಾದ ಕಲ್ಲಿಗೆ ಎದ್ದೇಳು ಎಂದು ಅಪ್ಪಣೆಕೊಡುವವನ ಗತಿಯನ್ನು ಅಯ್ಯೋ, ಏನು ಹೇಳಲಿ! ಇಂಥ ಬೊಂಬೆಯು ಬೋಧಿಸೀತೇ? ಇಗೋ, ಅದಕ್ಕೆ ಬೆಳ್ಳಿಬಂಗಾರವು ಹೊದಗಿಸಿದೆ, ಅದರೊಳಗೆ ಶ್ವಾಸವೇನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:19
27 ತಿಳಿವುಗಳ ಹೋಲಿಕೆ  

ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಅವುಗಳ ಬಾಯಲ್ಲಿ ಶ್ವಾಸ ಇಲ್ಲ.


ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.


ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.


ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


“ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.


ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.


ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.


ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಆದ್ದರಿಂದ ಇಗೋ, ದಿನಗಳು ಬರುವುವು. ಆಗ ನಾನು ಬಾಬಿಲೋನಿನ ವಿಗ್ರಹಗಳಿಗೆ ದಂಡಿಸುವೆನು. ಆದರೆ ದೇಶವೆಲ್ಲಾ ನಾಚಿಕೆಪಡುವುದು. ಹತರಾದವರ ದೇಹಗಳು ಅದರ ಮಧ್ಯದಲ್ಲಿ ಅಲ್ಲಿ ಇಲ್ಲಿ ಬಿದ್ದಿವೆ.


ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.


ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.


ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು.


ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ. ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.


ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!


ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ, ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸರಕುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಇಳಿದು ಹೋಗಿ, ಮಲಗಿಕೊಂಡು ಗಾಢ ನಿದ್ರೆಯಲ್ಲಿದ್ದನು.


ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.


ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ. ತೀರಿಹೋದ ಆ ಆತ್ಮಗಳು ಎದ್ದು ಬರುವುದಿಲ್ಲ. ನೀವು ಅವರನ್ನು ದಂಡಿಸಿ ಅಳಿಸಿಬಿಟ್ಟಿದ್ದೀರಿ. ಅವರ ನೆನಪೇ ಉಳಿಯದ ಹಾಗೆ ಮಾಡಿದ್ದೀರಿ.


ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ, ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸುವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.


ಹಳ್ಳದ ನುಣುಪಾದ ಕಲ್ಲುಗಳು ನಿಮ್ಮ ಪಾಲು. ಅವುಗಳೇ ಹೌದು, ಅವೇ ನಿನ್ನ ಪಾಲು. ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಧಾನ್ಯ ಸಮರ್ಪಣೆಯನ್ನು ಅರ್ಪಿಸಿದ್ದೀಯೆ. ನಾನು ಇದನ್ನೆಲ್ಲಾ ಕಂಡು ನನ್ನ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?


ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.


ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.


ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.


“ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ; ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ; ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ; ಅವುಗಳಲ್ಲಿ ಉಸಿರೇ ಇಲ್ಲ.


ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು