Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:11 - ಕನ್ನಡ ಸಮಕಾಲಿಕ ಅನುವಾದ

11 ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಗುಬ್ಬಿಗಳಂತೆ ಐಗುಪ್ತದಿಂದಲೂ, ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಗುಬ್ಬಿಗಳಂತೆ ಐಗುಪ್ತದಿಂದಲೂ ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಜಿಪ್ಟಿನಿಂದ ಅವರು ಪಕ್ಷಿಗಳಂತೆ ನಡುಗುತ್ತಾ ಬರುವರು. ಅಶ್ಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು ಮನೆಗೆ ಕರೆದುಕೊಂಡು ಹೋಗುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:11
17 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಮೇಘದಂತೆಯೂ, ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?


ಈಜಿಪ್ಟ್ ದೇಶದೊಳಗಿಂದ ಸಹ ಅವರನ್ನು ತಿರುಗಿ ತರುವೆನು. ಅಸ್ಸೀರಿಯದೊಳಗಿಂದ ಅವರನ್ನು ಕೂಡಿಸುವೆನು. ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು. ಅವರಿಗೆ ಸ್ಥಳ ಸಾಲದೆ ಇರುವುದು.


“ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ.


ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


ಅವರು ಇನ್ನು ಮೇಲೆ ಇತರ ಜನಾಂಗಗಳಿಗೆ ಕೊಳ್ಳೆಯಾಗುವುದಿಲ್ಲ; ಕಾಡುಮೃಗಗಳು ಅವರನ್ನು ತಿನ್ನುವುದಿಲ್ಲ. ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯವಾಗಿ ವಾಸಿಸುವರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.


ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು