Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 11:2 - ಕನ್ನಡ ಸಮಕಾಲಿಕ ಅನುವಾದ

2 ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, ನನ್ನಿಂದ ಅವರು ದೂರ ಹೊರಟು ಹೋದರು. ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 [ಪ್ರವಾದಿಗಳು ] ಕರೆಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು; ಬಾಳ್‍ದೇವತೆಗಳಿಗೆ ಯಜ್ಞಮಾಡಿ ಬೊಂಬೆಗಳಿಗೆ ಧೂಪಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಷ್ಟು ಹೆಚ್ಚಾಗಿ ನಾನು ಇಸ್ರೇಲರನ್ನು ಕರೆದೆನೋ ಅಷ್ಟೇ ಹೆಚ್ಚಾಗಿ ಅವರು ನನ್ನನ್ನು ತೊರೆದರು. ಇಸ್ರೇಲರು ಬಾಳನ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿದರು. ವಿಗ್ರಹಗಳಿಗೆ ಧೂಪ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 11:2
28 ತಿಳಿವುಗಳ ಹೋಲಿಕೆ  

ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.


ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”


ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


“ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.


“ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.


ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.


ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.


ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.


ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.


ಅವರು ಯೆಹೋವ ದೇವರನ್ನು ಬಿಟ್ಟು, ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು.


ಆದರೆ ತಮ್ಮ ಕೆಟ್ಟತನದಿಂದ ತಿರುಗದೆ, ಬೇರೆ ದೇವರುಗಳಿಗೆ ಧೂಪಸುಡುವುದನ್ನು ಬಿಡದೆ ಕೇಳಲಿಲ್ಲ, ನೀವು ಕಿವಿಗೊಡಲಿಲ್ಲ.


ಎಫ್ರಾಯೀಮನು ವಿಗ್ರಹಗಳಿಗೆ ಸೇರಿಕೊಂಡಿದ್ದಾನೆ. ಅವನನ್ನು ಅವನಷ್ಟಕ್ಕೆ ಬಿಟ್ಟುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು