Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:4 - ಕನ್ನಡ ಸಮಕಾಲಿಕ ಅನುವಾದ

4 ಯಾಕೋಬನು ದೇವದೂತನ ಸಂಗಡ ಹೋರಾಡಿ ಜಯಿಸಿದನು. ಅವನು ಅತ್ತು ಆತನ ಅನುಗ್ರಹಕ್ಕಾಗಿ ವಿಜ್ಞಾಪನೆಯನ್ನು ಸಲ್ಲಿಸಿದನು. ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು. ಅಲ್ಲಿ ಅವನು ಆತನೊಂದಿಗೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು; ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯೂ ಕಂಡು ಅಲ್ಲಿ ನಮ್ಮೊಡನೆ ಮಾತಾಡಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಆ ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:4
18 ತಿಳಿವುಗಳ ಹೋಲಿಕೆ  

“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ.


ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು.


ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.


ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.


ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.


ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹೊರಗೆ ಬಂದನು. ಅವನಿಗೆ, ಯಾಕೋಬ, ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರವತ್ತು ವರ್ಷದವನಾಗಿದ್ದನು.


ಆ ಮನುಷ್ಯನು ಅವನನ್ನು ಜಯಿಸದೆ ಇರುವುದನ್ನು ಕಂಡು, ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಸಂಗಡ ಹೋರಾಡುತ್ತಿರುವಾಗಲೇ ಯಾಕೋಬನ ತೊಡೆಯ ಕೀಲು ತಪ್ಪಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು