Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ನೀನು ನಿನ್ನ ದೇವರ ಕಡೆಗೆ ತಿರುಗಿಕೋ. ಪ್ರೀತಿಯನ್ನೂ, ನ್ಯಾಯವನ್ನೂ ಪಾಲಿಸು ಮತ್ತು ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ಇಸ್ರಯೇಲ್, ನೀನು ದೇವರ ಕಡೆ ತಿರುಗಿಕೋ, ನೀತಿ ಪ್ರೀತಿಗಳಿಗೆ ಅನುಗುಣವಾಗಿ ನಡೆ. ನಿರಂತರವಾಗಿ ದೇವರನ್ನು ನಿರೀಕ್ಷಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 [ಇಸ್ರಾಯೇಲೇ,] ನೀನು ನಿನ್ನ ದೇವರ ಸಹಾಯದಿಂದ ತಿರುಗಿಕೋ; ನೀತಿಪ್ರೀತಿಗಳನ್ನನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸವಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:6
39 ತಿಳಿವುಗಳ ಹೋಲಿಕೆ  

ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.


ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.


ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.


ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.


“ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.


“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.


ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.


ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.


ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.


ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.


ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


“ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.


“ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.


ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು