Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:16 - ಕನ್ನಡ ಸಮಕಾಲಿಕ ಅನುವಾದ

16 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ ತನ್ನ ದೋಷಫಲವನ್ನು ಅನುಭವಿಸಲೇಬೇಕು; ಅದರ ಜನರು ಖಡ್ಗಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:16
23 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.


ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.


ಅವರ ಮಕ್ಕಳೂ ಸಹ ಅವರ ಕಣ್ಣೆದುರಿಗೆ ಹತರಾಗುವರು. ಅವರ ಮನೆಗಳು ಸೂರೆಮಾಡಲಾಗುವುದು. ಅವರ ಹೆಂಡತಿಯರು ಅತ್ಯಾಚಾರಕ್ಕೆ ಈಡಾಗುವರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.


ಆದರೆ ಅವಳು ಸೆರೆಯಾಗಿ ದೇಶಾಂತರಕ್ಕೆ ಹೋದಳು. ಅವಳ ಕೂಸುಗಳು ಸಹ ಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು. ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು. ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು.


ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.


ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ರಭಸವಾಗಿ ಹರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವುವು; ತಗ್ಗುಗಳು ಸೀಳುವುವು.


ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.


ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”


ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ.


ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.


ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.


ಎಫ್ರಾಯೀಮಿನಿಂದ ಕೋಟೆಯೂ, ದಮಸ್ಕದ ರಾಜ್ಯಾಧಿಕಾರವೂ, ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು. ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಬಹುಕೋಪಗೊಂಡು, ಅವರನ್ನು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿಯಲಿಲ್ಲ.


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಆಗ ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು, ಸಮಾರ್ಯಕ್ಕೆ ವಿರೋಧವಾಗಿ ಬಂದು ಅದನ್ನು ಮೂರು ವರ್ಷಗಳವರೆಗೂ ಮುತ್ತಿಗೆಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು