Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:7 - ಕನ್ನಡ ಸಮಕಾಲಿಕ ಅನುವಾದ

7 ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷೆಯಂತೆ ಪಲ್ಲವಿಸುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:7
17 ತಿಳಿವುಗಳ ಹೋಲಿಕೆ  

ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.


ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.


ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ಭೂಮಿಯು ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೇಳುವುವು. ಅವು ಇಜ್ರೆಯೇಲಿಗೆ ಒಲಿಯುವುವು.


ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.


ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು.


ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ.


ನಿಮ್ಮ ಜನರು ನಿಮ್ಮಲ್ಲಿ ಸಂತೋಷಪಡುವಂತೆ ನೀವು ತಿರುಗಿ ನಮ್ಮನ್ನು ಉಜ್ಜೀವಿಸುವುದಿಲ್ಲವೋ?


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.


“ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.


ನನ್ನ ವಧುವೇ, ನಿನ್ನ ತುಟಿಗಳಿಂದ ಜೇನು ಸುರಿಯುತ್ತಿದೆ. ಹಾಲೂ, ಜೇನೂ ನಿನ್ನ ನಾಲಿಗೆ ಅಡಿಯಲ್ಲಿವೆ. ನಿನ್ನ ವಸ್ತ್ರಗಳ ಸುವಾಸನೆಯು ಲೆಬನೋನಿನ ಸುಗಂಧದಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು