Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 14:8 - ಕನ್ನಡ ಸಮಕಾಲಿಕ ಅನುವಾದ

8 ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಫ್ರಾಯೀಮು - ವಿಗ್ರಹಗಳ ಗೊಡವೆ ನನಗೆ ಇನ್ನೇಕೆ [ಅಂದುಕೊಳ್ಳುವದು]; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 14:8
23 ತಿಳಿವುಗಳ ಹೋಲಿಕೆ  

ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ. ನಾನು ತಪ್ಪುಮಾಡಿದ್ದರೂ, ಇನ್ನು ಮೇಲೆ ಅದನ್ನು ಮಾಡುವುದಿಲ್ಲ,’ ಎಂದು ಹೇಳಿದ್ದರೆ ಸರಿ.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಎದ್ದು ತನ್ನ ತಂದೆಯ ಬಳಿಗೆ ಹೋದನು. “ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ, ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು, ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.


ಮುಳ್ಳಿಗೆ ಬದಲಾಗಿ ತುರಾಯಿ ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವುವು. ಇದು ಯೆಹೋವ ದೇವರ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.


ಮರುಭೂಮಿಯಲ್ಲಿ ದೇವದಾರು, ಜಾಲೀಮರ, ಸುಗಂಧ, ಓಲಿವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.


ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಪಡೆದೆವು.


ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.


ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು