Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:10 - ಕನ್ನಡ ಸಮಕಾಲಿಕ ಅನುವಾದ

10 ಈಗ ಅವಳ ತುಚ್ಚತನವನ್ನು, ಅವಳ ಪ್ರೇಮಿಗಳ ಕಣ್ಣುಗಳ ಮುಂದೆ ಬಯಲು ಪಡಿಸುವೆನು. ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈಗ ಅವಳೊಂದಿಗೆ ವ್ಯಭಿಚಾರ ಮಾಡಿದವರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈಗ ಅವಳ ವಿುಂಡರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈಗ ನಾನು ಆಕೆಯನ್ನು ಬಟ್ಟೆಯನ್ನು ಬಿಚ್ಚಿಹಾಕುವೆನು. ಆಕೆಯ ಬೆತ್ತಲೆತನವನ್ನು ಆಕೆಯ ಪ್ರಿಯತಮರೆಲ್ಲರೂ ನೋಡುವರು. ನನ್ನ ಕೈಯೊಳಗಿಂದ ಯಾರೂ ಆಕೆಯನ್ನು ರಕ್ಷಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:10
19 ತಿಳಿವುಗಳ ಹೋಲಿಕೆ  

ಅವರು ನಿನ್ನ ವಿಷಯದಲ್ಲಿ ಹಗೆತೀರಿಸಿಕೊಳ್ಳುವರು. ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವುದು.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.


ಆದ್ದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ, ನಿನ್ನ ಮುಖದ ಮೇಲೆ ಎತ್ತುವೆನು.


ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ನೆರಿಗೆಯು ಕೀಳಲಾಗುವುದು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ, ಅವರನ್ನು ಬೋಳುಮಾಡುವರು.”


ದುಷ್ಟನಿಗೆ ಶಿಕ್ಷೆ ತಪ್ಪುವುದಿಲ್ಲ; ನೀತಿವಂತರ ವಂಶವು ಬಿಡುಗಡೆ ಹೊಂದುವುದು.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.


ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.


ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾ ಸ್ಥಳದಲ್ಲಿ ವ್ಯಭಿಚಾರ ಮಾಡಿದೆ; ನೀನು ಅವನ ಬಳಿಗೆ ಹೋದೆ ಮತ್ತು ಅವನು ನಿನ್ನ ಸೌಂದರ್ಯವನ್ನು ತೆಗೆದುಕೊಂಡಿದ್ದಾನೆ.


ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.


“ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ, ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು. ಆದರೆ ಬಾಳನ ಆರಾಧನೆಯಲ್ಲಿ ಅವನು ಅಪರಾಧಿಯಾಗಿ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು