Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:12 - ಕನ್ನಡ ಸಮಕಾಲಿಕ ಅನುವಾದ

12 ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು, ಅವಳು ಹೇಳಿದ ಅವಳ ದ್ರಾಕ್ಷಿಬಳ್ಳಿಗಳನ್ನು, ಅವಳ ಅಂಜೂರದ ಮರಗಳನ್ನು ನಾನು ಹಾಳು ಮಾಡಿ, ಅವುಗಳನ್ನು ನಾನು ಕಾಡನ್ನಾಗಿ ಮಾಡುವೆನು. ಕಾಡುಮೃಗಗಳು ಅವುಗಳನ್ನು ನುಂಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವಳು ಯಾವ ಅಂಜೂರ ಮತ್ತು ದ್ರಾಕ್ಷಿಗಳನ್ನು ‘ಇವು ನನ್ನೊಂದಿಗೆ ವ್ಯಭಿಚಾರ ಮಾಡಿದವರಿಂದಾದ ಪ್ರತಿಫಲ’ ಅಂದುಕೊಂಡಳೋ, ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಕೆಯ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡುವೆನು. ‘ಇವುಗಳನ್ನು ನನ್ನ ಪ್ರಿಯತಮರು ನನಗೆ ಕೊಟ್ಟರು’ ಎಂದು ಆಕೆ ಹೇಳುತ್ತಾಳೆ. ಆದರೆ ನಾನು ಆಕೆಯ ತೋಟವನ್ನೇ ಬದಲಾಯಿಸುವೆನು. ಅದು ದಟ್ಟ ಅಡವಿಯಂತೆ ಆಗುವದು. ಅದರಲ್ಲಿದ್ದ ಮರಗಳ ಹಣ್ಣನ್ನು ಕಾಡುಪ್ರಾಣಿಗಳು ಬಂದು ತಿನ್ನುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:12
14 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.


ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.


ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು.


ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಇಸ್ರಾಯೇಲೇ, ಬೇರೆ ಜನಾಂಗಗಳು ಉಲ್ಲಾಸಿಸುವ ಪ್ರಕಾರ ಸಂತೋಷ ಪಡಬೇಡ. ಏಕೆಂದರೆ ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ಮಾಡಿದ್ದೀಯೆ. ಎಲ್ಲಾ ಧಾನ್ಯದ ಕಣಗಳಲ್ಲಿ ವ್ಯಭಿಚಾರದ ಕೂಲಿಯನ್ನು ಪ್ರೀತಿ ಮಾಡಿದ್ದೀಯೆ.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


“ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’ ”


ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು, ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವುದಿಲ್ಲವೋ?


ಮಾರ್ಗದಲ್ಲಿ ಹಾದುಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಏಕೆ ಅದರ ಬೇಲಿಗಳನ್ನು ನೀವು ಮುರಿದುಬಿಟ್ಟಿದ್ದೀರಿ?


ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ಆದ್ದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ, ನಿನ್ನ ಮುಖದ ಮೇಲೆ ಎತ್ತುವೆನು.


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು