Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 2:9 - ಕನ್ನಡ ಸಮಕಾಲಿಕ ಅನುವಾದ

9 “ಆದ್ದರಿಂದ ನಾನು ತಿರುಗಿಕೊಂಡು, ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ, ನನ್ನ ದ್ರಾಕ್ಷಾರಸವನ್ನು ಅದರ ಸುಗ್ಗಿಯ ಸಮಯದಲ್ಲಿಯೂ ತೆಗೆದ ಹಾಗೆ, ಅವಳ ಬೆತ್ತಲೆತನವನ್ನು ಮುಚ್ಚವುದಕ್ಕಿದ್ದ ನನ್ನ ಉಣ್ಣೆಯನ್ನೂ, ನನ್ನ ನಾರುಬಟ್ಟೆಯನ್ನೂ ತೆಗೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಕಾರಣ ನಾನು ನನ್ನ ಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವುದಕ್ಕೆ ನಾನು ಕೊಟ್ಟ ಉಣ್ಣೆ, ನಾರುಗಳನ್ನು ಹಿಂತೆಗೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದಕಾರಣ ನಾನು ದವಸಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು. ಅವಳ ಮಾನವನ್ನು ಮುಚ್ಚುತ್ತಿದ್ದ ಉಣ್ಣೆಉಡಿಗೆಗಳನ್ನು ಹಿಂತೆಗೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದಕಾರಣ ನಾನು ನನ್ನ ಧಾನ್ಯದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವದಕ್ಕೆ ನಾನು ಕೊಟ್ಟ ಉಣ್ಣೆನಾರುಗಳನ್ನು ಕಿತ್ತುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನಾನು ಹಿಂತಿರುಗಿ ಬರುವೆನು. ನಾನು ಕೊಟ್ಟಿರುವ ಧಾನ್ಯವು ಕೊಯ್ಲಿಗೆ ತಯಾರಾದ ಅವಳಿಂದ ಅದನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ದ್ರಾಕ್ಷಿಹಣ್ಣು ಪಕ್ವವಾಗಿದ್ದಾಗ ನಾನು ಬಂದು ನನ್ನ ದ್ರಾಕ್ಷಾರಸವನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಕೊಟ್ಟಿರುವ ಉಣ್ಣೆ ಮತ್ತು ನಾರಿನ ಬಟ್ಟೆಯನ್ನು ಹಿಂದಕ್ಕೆ ತೆಗೆದುಕೊಳ್ಳುವೆನು. ನಾನು ಅದನ್ನು ಅವಳಿಗೆ ತನ್ನ ಬೆತ್ತಲೆ ಶರೀರವನ್ನು ಮುಚ್ಚಿಕೊಳ್ಳುವದಕ್ಕೋಸ್ಕರ ಕೊಟ್ಟಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 2:9
15 ತಿಳಿವುಗಳ ಹೋಲಿಕೆ  

ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.


ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”


ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?


ಧಾನ್ಯ ಕಣವು ಮತ್ತು ದ್ರಾಕ್ಷಿಯ ತೊಟ್ಟಿಯೂ ಅವರನ್ನು ಪೋಷಿಸುವುದಿಲ್ಲ. ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವುವು.


“ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.


ಏಕೆಂದರೆ ಉತ್ತರದ ಅರಸನು ಪುನಃ ತಿರುಗಿಕೊಂಡು ಮೊದಲನೆಯದಕ್ಕಿಂತಲೂ ದೊಡ್ಡ ಸೈನ್ಯವನ್ನು ನಿಲ್ಲಿಸಿ, ಕೆಲವು ವರ್ಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ, ಬಹಳ ಆಯುಧಗಳ ಸಂಗಡವೂ ನಿಶ್ಚಯವಾಗಿ ಬರುವನು.


ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.


ಅನಂತರ ನಿನ್ನನ್ನು ಅವರ ಕೈಗಳಿಗೆ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ, ನಿನ್ನ ಉನ್ನತ ಸ್ಥಾನಗಳನ್ನು ಒಡೆದು ಬಿಡುವರು. ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಆಭರಣಗಳನ್ನು ಕಸಿದುಕೊಂಡು, ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿಹೋಗುವರು.


ಆದ್ದರಿಂದ ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಭೂಪ್ರದೇಶವನ್ನು ಕಡಿಮೆ ಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು, ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಪುತ್ರಿಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು