Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 3:1 - ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ - ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲ್ಯರನ್ನು ಯೆಹೋವನು ಪ್ರೀತಿಸುವ ಪ್ರಕಾರ ನೀನು ವಿುಂಡನಿಗೆ ಪ್ರಿಯಳೂ ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ ಎಂದು ಅಪ್ಪಣೆಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಿರುಗಿ ಯೆಹೋವನು ನನಗೆ ಮತ್ತೆ ಹೇಳಿದ್ದೇನೆಂದರೆ, “ಗೋಮೆರಳಿಗೆ ಅನೇಕ ಪ್ರಿಯತಮರಿದ್ದಾರೆ, ಆದರೆ ನೀನು ಆಕೆಯನ್ನು ಪ್ರೀತಿ ಮಾಡುತ್ತಲೇ ಇರಬೇಕು. ಯಾಕೆಂದರೆ ಅದು ಯೆಹೋವನ ರೀತಿ. ಯೆಹೋವನು ಇಸ್ರೇಲ್ ಜನರನ್ನು ಪ್ರೀತಿಸುತ್ತಲೇ ಇದ್ದಾನೆ. ಆದರೆ ಅವರು ಅನ್ಯದೇವರುಗಳನ್ನು ಆರಾಧಿಸುತ್ತಲೇ ಇದ್ದಾರೆ. ಅವರು ಒಣದ್ರಾಕ್ಷಿಯ ಉಂಡೆಗಳನ್ನು ತಿನ್ನಲು ಆಶಿಸುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 3:1
34 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ, ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.


ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.


ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.


ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ, ಶ್ರೇಷ್ಠವಾದ ಎಣ್ಣೆಗಳಿಂದ ನಿಮ್ಮನ್ನು ಅಭಿಷೇಕಿಸಿಕೊಳ್ಳುತ್ತೀರಿ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನ ಪಡುವುದಿಲ್ಲ.


ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ.


ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ನೆರೆದುಬಂದ ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.


ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.


ಹೊರಗೆ ಹೋಗಿ ತಮ್ಮ ದ್ರಾಕ್ಷಿ ಫಲಗಳನ್ನು ಕೊಯ್ದು, ಅವುಗಳನ್ನು ತುಳಿದು ಸಂತೋಷಪಟ್ಟು, ತಮ್ಮ ದೇವರ ಮನೆಯೊಳಗೆ ಹೋಗಿ, ತಿಂದು ಕುಡಿದು ಅಬೀಮೆಲೆಕನನ್ನು ಶಪಿಸಿದರು.


ಮರುದಿನ ಬೆಳಿಗ್ಗೆ ಜನರು ಎದ್ದು, ದಹನಬಲಿಗಳನ್ನೂ, ಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು, ಆಮೇಲೆ ಎದ್ದು ಕುಣಿದಾಡಿದರು.


“ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿ ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು, ಕುಣಿದಾಡುವುದಕ್ಕೆ ಎದ್ದರು,” ಎಂದು ಬರೆದಿರುವಂತೆ ನೀವೂ ವಿಗ್ರಹಾರಾಧಕರಾಗಬೇಡಿರಿ.


ಅದಕ್ಕೆ ಯೇಸು ಅವನಿಗೆ, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸವನ್ನು ಮುಗಿಸು,” ಎಂದು ಹೇಳಿದರು. ಕೂಡಲೇ ಆ ಜನರು ಮುಂದೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು.


ನಮ್ಮ ಅರಸನ ಹಬ್ಬದ ದಿವಸಗಳಲ್ಲಿ ರಾಜಕುಮಾರರು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುತ್ತಾರೆ. ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.


ಮದ್ಯಪಾನ, ದ್ರಾಕ್ಷಾರಸ ಇವು ಜನರನ್ನು ಜ್ಞಾನಹೀನರನ್ನಾಗಿ ಮಾಡುತ್ತವೆ.


ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು.


ದ್ರಾಕ್ಷೆಯಿಂದ ನನ್ನನ್ನು ಬಲಪಡಿಸು. ಸೇಬು ಹಣ್ಣುಗಳಿಂದ ನನ್ನನ್ನು ಚೇತನಗೊಳಿಸು. ಏಕೆಂದರೆ ನಾನು ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.


ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು