Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:11 - ಕನ್ನಡ ಸಮಕಾಲಿಕ ಅನುವಾದ

11 ಮದ್ಯಪಾನ, ದ್ರಾಕ್ಷಾರಸ ಇವು ಜನರನ್ನು ಜ್ಞಾನಹೀನರನ್ನಾಗಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಮದ್ಯಪಾನ, ದ್ರಾಕ್ಷಾರಸ - ಇವು ಜನರನ್ನು ಬುದ್ಧಿಹೀನರನ್ನಾಗಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ವ್ಯಭಿಚಾರದ್ರಾಕ್ಷಾರಸಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಲೈಂಗಿಕಪಾಪ, ಗಡುಸಾದ ಮದ್ಯ ಮತ್ತು ಹೊಸ ದ್ರಾಕ್ಷಾರಸ ಇವುಗಳಿಂದ ವಿಚಾರಪ್ರಜ್ಞೆಯನ್ನು ಕಳೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:11
15 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.


ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.


ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.


“ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ.


ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.


ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ;


“ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ.


“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.


“ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು