Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:15 - ಕನ್ನಡ ಸಮಕಾಲಿಕ ಅನುವಾದ

15 “ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:15
28 ತಿಳಿವುಗಳ ಹೋಲಿಕೆ  

ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ಅಲ್ಲಿನ ಜನರು ಅಯೋಗ್ಯರೇ? ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು.


ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ಅವರನ್ನು ಹಗೆ ಮಾಡಿದ್ದೇನೆ. ಅವರ ಪಾಪ ಕೃತ್ಯಗಳ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ, ಅವರನ್ನು ಇನ್ನು ಪ್ರೀತಿಸುವುದೇ ಇಲ್ಲ. ಅವರ ಅಧಿಕಾರಿಗಳೆಲ್ಲಾ ತಿರುಗಿ ಬೀಳುವವರೇ.


“ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ಪಾಪ ಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.”


ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”


ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.”


ಇಸ್ರಾಯೇಲಿನ ಪಾಪಕ್ಕೆ ಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು. ಮುಳ್ಳುಗಿಡಗಳೂ, ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವುವು. ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ! ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು.


ಬೇತಾವೆನಿನ ಬಸವ ವಿಗ್ರಹಕ್ಕೆ ಸಮಾರ್ಯದ ನಿವಾಸಿಗಳು ಭಯಪಡುವರು. ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. ಅದರ ಯಾಜಕರು ನಡುಗುವರು. ಏಕೆಂದರೆ ಅದರ ವೈಭವವು ಅದರಿಂದ ಕುಂದಿಹೋಯಿತು.


“ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.


ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”


ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.


ಮತ್ತು ಸಂಬಂಧಿಯೊಬ್ಬರು ಮೃತ ದೇಹಗಳನ್ನು ಸುಡಲು ಆ ಮನೆಯಿಂದ ಹೊರತೆಗೆಯಲು ಬಂದಾಗ ಮತ್ತು ಅಲ್ಲಿ ಅಡಗಿಕೊಂಡಿದ್ದ ವ್ಯಕ್ತಿಯನ್ನು, “ನಿಮ್ಮೊಂದಿಗೆ ಬೇರೆ ಯಾರಾದರೂ ಇದ್ದಾರೆಯೇ?” ಎಂದು ಕೇಳಲು ಅವನು ಇಲ್ಲ ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ನಾವು ಯೆಹೋವ ದೇವರ ಹೆಸರನ್ನು ತೆಗೆದುಕೊಳ್ಳಬಾರದು.”


ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.


“ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.


ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.


ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ.


ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು.


ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.


ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.


ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.


ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು. ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ, ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು