Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:2 - ಕನ್ನಡ ಸಮಕಾಲಿಕ ಅನುವಾದ

2 ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜನರು ಆಣೆ ಇಟ್ಟುಕೊಳ್ಳುತ್ತಾರೆ, ಸುಳ್ಳನ್ನಾಡುತ್ತಾರೆ, ಕೊಲೆ ಮಾಡುತ್ತಾರೆ ಮತ್ತು ಸೂರೆ ಮಾಡುತ್ತಾರೆ. ಅವರು ವ್ಯಭಿಚಾರವೆಂಬ ಪಾಪಗಳನ್ನು ಮಾಡುತ್ತಾರೆ. ಆದ್ದರಿಂದ ಅವರು ಮಕ್ಕಳನ್ನು ಹುಟ್ಟಿಸುತ್ತಾರೆ. ಜನರು ತಿರುಗಿತಿರುಗಿ ಕೊಲೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:2
42 ತಿಳಿವುಗಳ ಹೋಲಿಕೆ  

ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.


ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ.


ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.


ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.


ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ.


ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.


ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.


ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;


ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.


ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಕಷ್ಟ!


ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ ಕಡಿಮೆ ಅಳತೆಯನ್ನು ನಾನು ಮರೆಯಬೇಕೋ?


ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾಧಿಪತಿಗಳೇ, ನ್ಯಾಯವನ್ನು ನಿಂದಿಸಿ ಸರಿಯಾದದ್ದನ್ನೆಲ್ಲಾ ಡೊಂಕುಮಾಡುವವರೇ,


ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ,


ಆದರೂ ಎಫ್ರಾಯೀಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದ್ದರಿಂದ ಯೆಹೋವ ದೇವರು ಅದರ ರಕ್ತಾಪರಾಧವನ್ನು ಅದರ ಮೇಲೆ ಬರಮಾಡುವರು. ಅವನ ನಿಂದೆಯನ್ನು ಯೆಹೋವ ದೇವರು ಅವನ ಮೇಲೆ ಬರಮಾಡುವರು.


ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.


“ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ.


ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯನ್ನು ಮಾಡುವುದರಲ್ಲಿ ಮಗ್ನರಾಗಿದ್ದರೆ. ಆದರೂ ನಾನು ಅವರೆಲ್ಲರನ್ನು ಶಿಕ್ಷಿಸುವವನಾಗಿದ್ದೇನೆ.


ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ, ಅವಳ ಯಾಜಕರ ಅಕ್ರಮಗಳಿಗೋಸ್ಕರವೂ ಹೀಗಾಯಿತು. ಏಕೆಂದರೆ ಇವರು ನೀತಿವಂತರ ರಕ್ತವನ್ನು ಅವರ ಮಧ್ಯದಲ್ಲಿ ಚೆಲ್ಲಿದ್ದರು.


“ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.


ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.


ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು, ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.


ಏಕೆಂದರೆ ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲನ್ನಾಗಲಿ, ಯೆಹೂದವನ್ನಾಗಲಿ ಕೈಬಿಡಲಿಲ್ಲ.


“ ‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.


ಗಿಲ್ಯಾದ್ ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.


ಅವರೆಲ್ಲರು ವ್ಯಭಿಚಾರಿಗಳು, ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸುವ ಒಲೆಗೆ ಸಮಾನರಾಗಿದ್ದಾರೆ. ಅವನು ಹಿಟ್ಟು ನಾದಿದ ಮೇಲೆ, ಅದು ಹುಳಿಯಾಗುವ ತನಕ ಉರಿಸದೆ ಬಿಟ್ಟಿರುವ ಕೆಂಡಕ್ಕೆ ಸಮಾನರಾಗಿದ್ದಾರೆ.


ಆದರೆ ನೀವು ದುಷ್ಟತ್ವವನ್ನು ಬಿತ್ತಿ, ಅನ್ಯಾಯವನ್ನು ಕೊಯ್ದಿರಿ, ವಂಚನೆಯ ಫಲವನ್ನು ತಿಂದಿದ್ದೀರಿ. ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿ ನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ.


ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು