Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:3 - ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲು ದೇಶವು ನರಳುವದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಆಕಾಶಪಕ್ಷಿಗಳೂ ಬಳಲಿಹೋಗುವವು; ಸಮುದ್ರದ ಮೀನುಗಳು ಸಹ ನೀಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:3
17 ತಿಳಿವುಗಳ ಹೋಲಿಕೆ  

“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. ಸಕಲನದಿಗಳನ್ನು ಬತ್ತಿಸುತ್ತಾರೆ. ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ.


ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.


ಆಗ ಸಮುದ್ರದ ಮೀನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವುವು; ಪರ್ವತಗಳು ಉರುಳಿಹೋಗುವುವು. ಝರಿಗಳು ಕವಚಿಕೊಳ್ಳುತ್ತಾ, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವುದು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.


ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿ ಹೋಗಿದ್ದವು.


“ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.


ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”


ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.


ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.


ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.


‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”


ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು