Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 4:8 - ಕನ್ನಡ ಸಮಕಾಲಿಕ ಅನುವಾದ

8 ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಜನರ ಪಾಪದೊಂದಿಗೆ ಯಾಜಕರೂ ಒಂದಾದರು, ಅವರು ಹೆಚ್ಚುಹೆಚ್ಚು ಪಾಪಗಳನ್ನು ಮಾಡಲು ಆಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 4:8
18 ತಿಳಿವುಗಳ ಹೋಲಿಕೆ  

ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’


ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.


ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ.


“ ‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.


“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?


ಯೆಹೋವ ದೇವರೇ, ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಆದರೆ ನೀವು ದುಷ್ಟತ್ವವನ್ನು ಬಿತ್ತಿ, ಅನ್ಯಾಯವನ್ನು ಕೊಯ್ದಿರಿ, ವಂಚನೆಯ ಫಲವನ್ನು ತಿಂದಿದ್ದೀರಿ. ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿ ನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ.


ಎಫ್ರಾಯೀಮು ಹೆಚ್ಚಳ ಪಡುತ್ತಾ ಹೀಗೆಂದು ಹೇಳುತ್ತದೆ, “ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು. ನನ್ನ ಐಶ್ವರ್ಯದಿಂದಾಗಿ ಅವರು ನನ್ನಲ್ಲಿ ಯಾವ ಅಪರಾಧ ಅಥವಾ ಪಾಪವನ್ನು ಕಾಣುವುದಿಲ್ಲ.”


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.


ಆದರೆ ಪ್ರಾಯಶ್ಚಿತ್ತ ಬಲಿಯ ಹಣವನ್ನು, ಪಾಪ ಪರಿಹಾರದ ಬಲಿಯ ಹಣವನ್ನು ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬರಲಿಲ್ಲ, ಅದು ಯಾಜಕರದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು