Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 5:13 - ಕನ್ನಡ ಸಮಕಾಲಿಕ ಅನುವಾದ

13 “ಎಫ್ರಾಯೀಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ, ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. ಆದರೆ ನಿಮ್ಮನ್ನು ಗುಣಪಡಿಸಲು ಅವನು ಶಕ್ತನಲ್ಲ. ನಿಮ್ಮ ಗಾಯವನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 5:13
16 ತಿಳಿವುಗಳ ಹೋಲಿಕೆ  

“ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ.


ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.


ಅದು ಸಹ, ಮಹಾರಾಜನಿಗೆ ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ.


ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ.


“ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಿನ್ನ ಗಾಯವು ಗುಣವಾಗದಂಥಾದ್ದು. ನಿನ್ನ ಬಾಸುಂಡೆಯು ಅಘೋರವಾದದ್ದು.


ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


ಸಮಾರ್ಯದ ಗಾಯವು ಗುಣವಾಗದಂಥದ್ದು, ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಿಲಿಗೂ ಯೆರೂಸಲೇಮಿನವರೆಗೂ ಅದು ತಲುಪಿತು.


ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”


ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನಿಗೆ, “ನಾನು ನಿನ್ನ ಸೇವಕನೂ, ನಿನ್ನ ಮಗನೂ ಆಗಿದ್ದೇನೆ. ನನಗೆ ವಿರೋಧವಾಗಿ ಎದ್ದ ಅರಾಮಿನ ಅರಸನ ಕೈಗೂ, ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ, ರಕ್ಷಿಸುವುದಕ್ಕೆ ಬರಬೇಕು,” ಎಂದು ಹೇಳಿ ಸೇವಕರನ್ನು ಕಳುಹಿಸಿದನು.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಆ ದಿನದಲ್ಲಿ ಅವನು ಆಣೆಯಿಟ್ಟು, “ನಾನು ಉಪಶಮನ ಮಾಡುವವನಾಗುವುದಿಲ್ಲ. ಏಕೆಂದರೆ ನನ್ನ ಮನೆಯಲ್ಲಿ ಅನ್ನವಾಗಲಿ, ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ,” ಎಂದು ಉತ್ತರಿಸುವನು.


“ಒಹೊಲಳು ಇನ್ನು ನನ್ನ ವಶವಾಗಿರುವಾಗಲೇ ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು ತನ್ನ ನೆರೆಯವರಾದ ಅಸ್ಸೀರಿಯದವರನ್ನು,


ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ. ಹುಡುಕಿದರೂ ಅವರು ಸಿಕ್ಕುವುದಿಲ್ಲ. ಆಗ ಅವಳು ಹೀಗೆ ಎಂದುಕೊಳ್ಳುವಳು, ‘ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು. ಏಕೆಂದರೆ ಆಗ ನನ್ನ ಸ್ಥಿತಿ ಪ್ರಸ್ತುತ ಸ್ಥಿತಿಗಿಂತ ಉತ್ತಮವಾಗಿತ್ತು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು