Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:10 - ಕನ್ನಡ ಸಮಕಾಲಿಕ ಅನುವಾದ

10 ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ; ಆತನನ್ನು ಆಶ್ರಯಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲಿನ ಅಹಂಕಾರವೇ ಅದರ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಷ್ಟೆಲ್ಲ ಸಂಭವಿಸಿದರೂ ಅದು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗುವುದಿಲ್ಲ; ಅವರನ್ನು ಆಶ್ರಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇದೆಲ್ಲಾ ಸಂಭವಿಸಿದರೂ ಅದು ತನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲಿಲ್ಲ, ಆತನನ್ನು ಆಶ್ರಯಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಎಫ್ರಾಯೀಮನ ಹೆಮ್ಮೆಯು ಅವನಿಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತದೆ. ಜನರಿಗೆ ನಾನಾ ತರದ ಸಂಕಟಗಳು ಬಂದಾಗ್ಯೂ ಅವರು ತಮ್ಮ ದೇವರಾದ ಯೆಹೋವನ ಬಳಿಗೆ ಹೋಗಲಿಲ್ಲ. ಜನರು ತಮ್ಮ ಸಹಾಯಕ್ಕಾಗಿ ಆತನಿಗೆ ಮೊರೆಯಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:10
18 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಗರ್ವವು ಅವರ ಮುಖದ ಮುಂದೆ ಸಾಕ್ಷಿಕೊಡುತ್ತದೆ. ಇಸ್ರಾಯೇಲು ಮತ್ತು ಎಫ್ರಾಯೀಮು ತಮ್ಮ ಪಾಪದಲ್ಲಿ ಎಡವಿ ಬೀಳುವವು. ಯೆಹೂದವು ಸಹ ಅವರೊಂದಿಗೆ ಬೀಳುವುದು.


ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.


ಅರ್ಥಮಾಡಿಕೊಳ್ಳುವವನು ಒಬ್ಬನೂ ಇಲ್ಲ. ದೇವರನ್ನು ಹುಡುಕುವವನು ಒಬ್ಬನೂ ಇಲ್ಲ.


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, ಒಣಕೆಯಿಂದ ಕುಟ್ಟಿದರೂ, ಅವನಿಂದ ಮೂರ್ಖನತವು ತೊಲಗುವುದಿಲ್ಲ.


ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ದೇವರು ಸ್ವರ್ಗದಿಂದ ಮನುಷ್ಯರ ಮೇಲೆ ದೃಷ್ಟಿಸಿದರು.


ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.


ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.


ಯೆಹೋವ ದೇವರನ್ನು ಅನುಸರಿಸದೆ ಹಿಂತಿರುಗಿ ಹೋಗುವವರನ್ನು ಯೆಹೋವ ದೇವರನ್ನು ಹುಡುಕದೆಯೂ ವಿಚಾರಿಸದೆಯೂ ಇರುವವರನ್ನೂ ಕಡಿದುಬಿಡುವೆನು.”


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು