Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:11 - ಕನ್ನಡ ಸಮಕಾಲಿಕ ಅನುವಾದ

11 “ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಫ್ರಾಯೀಮು ಬುದ್ಧಿ ವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗೆ ಎಫ್ರಾಯೀಮ್ ತಿಳಿವಳಿಕೆ ಇಲ್ಲದ ಮೂರ್ಖ ಪಾರಿವಾಳದಂತಾಗಿದೆ. ಜನರು ಸಹಾಯಕ್ಕಾಗಿ ಈಜಿಪ್ಟನ್ನು ಕರೆದರು, ಅಶ್ಶೂರ್ಯದ ಕಡೆಗೆ ಓಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:11
25 ತಿಳಿವುಗಳ ಹೋಲಿಕೆ  

ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.


“ಎಫ್ರಾಯೀಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ, ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. ಆದರೆ ನಿಮ್ಮನ್ನು ಗುಣಪಡಿಸಲು ಅವನು ಶಕ್ತನಲ್ಲ. ನಿಮ್ಮ ಗಾಯವನ್ನು ಗುಣಪಡಿಸಲಾರನು.


ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಮದ್ಯಪಾನ, ದ್ರಾಕ್ಷಾರಸ ಇವು ಜನರನ್ನು ಜ್ಞಾನಹೀನರನ್ನಾಗಿ ಮಾಡುತ್ತವೆ.


ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.


ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”


ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.


ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?


ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ.


ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.


ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.


ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


“ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ.


ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.


ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನಿಗೆ, “ನಾನು ನಿನ್ನ ಸೇವಕನೂ, ನಿನ್ನ ಮಗನೂ ಆಗಿದ್ದೇನೆ. ನನಗೆ ವಿರೋಧವಾಗಿ ಎದ್ದ ಅರಾಮಿನ ಅರಸನ ಕೈಗೂ, ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ, ರಕ್ಷಿಸುವುದಕ್ಕೆ ಬರಬೇಕು,” ಎಂದು ಹೇಳಿ ಸೇವಕರನ್ನು ಕಳುಹಿಸಿದನು.


ಯೆಹೂದರೊಂದಿಗೆ ಯೆಹೋವ ದೇವರು ಆಪಾದನೆ ಮಾಡಿ, ಯಾಕೋಬನನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ, ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ, ಅವನಿಗೆ ಪ್ರತಿಫಲವನ್ನು ಕೊಡುವರು.


ನಿನ್ನ ಸಂಗಡ ಒಡಂಬಟ್ಟ ಮನುಷ್ಯರೆಲ್ಲರು ನಿನ್ನನ್ನು ಮೇರೆಯವರೆಗೂ ತಂದಿದ್ದಾರೆ. ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸಮಾಡಿ ನಿನ್ನ ಮೇಲೆ ಜಯ ಹೊಂದಿದ್ದಾರೆ. ನಿನ್ನ ರೊಟ್ಟಿಯನ್ನು ತಿನ್ನುವವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ. ಆದರೆ ನೀನು ಅದನ್ನು ತಿಳಿದುಕೊಳ್ಳಲಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು