Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:15 - ಕನ್ನಡ ಸಮಕಾಲಿಕ ಅನುವಾದ

15 ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ. ಆದರೂ ಅವರು ನನಗೆ ವಿರುದ್ಧವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಿಗೆ ಯುದ್ಧವನ್ನು ಕಲಿಸಿ, ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನೇ ಅವರಿಗೆ ಯುದ್ಧಾಭ್ಯಾಸ ಮಾಡಿಸಿ, ಅವರ ಭುಜಬಲವನ್ನು ಬೆಳೆಸಿದರೂ ನನ್ನ ವಿರುದ್ಧ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರಿಗೆ ಯುದ್ಧವನ್ನು ಕಲಿಸಿ ತೋಳುಗಳನ್ನು ಬಲಪಡಿಸಿದ ನನಗೂ ವಿರುದ್ಧವಾಗಿ ಕೇಡನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಅವರಿಗೆ ತರಬೇತಿಕೊಟ್ಟು ಅವರ ತೋಳುಗಳನ್ನು ಬಲಪಡಿಸಿದೆನು. ಆದರೆ ನನಗೆ ವಿರುದ್ಧವಾಗಿ ಅವರು ದುರಾಲೋಚನೆಯನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:15
18 ತಿಳಿವುಗಳ ಹೋಲಿಕೆ  

ಯೆಹೋವ ದೇವರಿಗೆ ವಿರೋಧವಾಗಿ ಅವರು ಏನೇನು ಯೋಚಿಸಿರುವರೋ, ಅದನ್ನು ಅವರು ಅಂತ್ಯಗೊಳಿಸುವರು. ತೊಂದರೆಯು ಎರಡು ಸಾರಿ ಏಳದು.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಒಬ್ಬ ತಂದೆ ಮಕ್ಕಳಾಗಿರುವ ನಿಮಗೆ ಎಚ್ಚರಿಸಲಾದ ಮಾತನ್ನು ನೀವು ಮರೆತಿದ್ದೀರಿ. ಅದು, “ನನ್ನ ಮಗನೇ, ಕರ್ತದೇವರ ಶಿಕ್ಷೆಯನ್ನು ಹಗುರವಾಗಿ ಎಣಿಸಬೇಡ. ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ಪವಿತ್ರಾತ್ಮ ದೇವರ ಮೂಲಕ ನಿಮ್ಮ ಸೇವಕನೂ ನಮ್ಮ ಪಿತೃವೂ ಆದ ದಾವೀದನ ಮುಖಾಂತರ ನೀವು ಮಾತನಾಡಿ: “ ‘ರಾಷ್ಟ್ರಗಳು ರೋಷಗೊಳ್ಳುವುದೇಕೆ? ಜನರು ವ್ಯರ್ಥವಾಗಿ ಕಲ್ಪಿಸಿಕೊಂಡದ್ದೇಕೆ?


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.


ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು.


ಹಾನಿಮಾಡುವವರೇ, ಎಷ್ಟರವರೆಗೆ ನೀವು ದಾಳಿಮಾಡುವಿರಿ. ಬಾಗುವ ಗೋಡೆಯಂತೆಯೂ, ಅಲ್ಲಾಡುವ ಬೇಲಿಯಂತೆಯೂ ನನ್ನನ್ನು ಕೆಡವಲು ಯತ್ನಿಸುವಿರಾ?


ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?


“ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು.


ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ.


“ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು