Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:2 - ಕನ್ನಡ ಸಮಕಾಲಿಕ ಅನುವಾದ

2 ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮನದಟ್ಟು ಮಾಡಿಕೊಳ್ಳುವುದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಮ್ಮ ದುರ್ಮಾರ್ಗವೆಲ್ಲಾ ಯೆಹೋವನ ಜ್ಞಾಪಕದಲ್ಲಿರುತ್ತದೆ ಎಂದು ಅವರು ಮಂದಟ್ಟುಮಾಡಿಕೊಳ್ಳುವದಿಲ್ಲ; ಅವರ ದುಷ್ಕೃತ್ಯಗಳು ಈಗ ಅವರನ್ನು ಮುತ್ತಿಕೊಂಡಿವೆ, ನನ್ನ ಕಣ್ಣೆದುರಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:2
33 ತಿಳಿವುಗಳ ಹೋಲಿಕೆ  

ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.


ನಮ್ಮ ಅಕ್ರಮಗಳನ್ನು ನಿಮ್ಮ ಮುಂದೆ ಇಟ್ಟಿದ್ದೀರಿ. ನಾವು ಮುಚ್ಚಿಟ್ಟುಕೊಂಡಿರುವ ಪಾಪಗಳು ನಿಮ್ಮ ಸನ್ನಿಧಿಯಲ್ಲಿವೆ.


ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.


ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”


ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು.


ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ.


ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.


“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”


ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.


ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


“ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ.


ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


“ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.


“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.


“ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.


“ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?


ಯಾಜಕನು ಹೇಗೋ ಹಾಗೆಯೇ ಜನರು ಇರುವರು. ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವೆನು.


ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ಅವರನ್ನು ಹಗೆ ಮಾಡಿದ್ದೇನೆ. ಅವರ ಪಾಪ ಕೃತ್ಯಗಳ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ, ಅವರನ್ನು ಇನ್ನು ಪ್ರೀತಿಸುವುದೇ ಇಲ್ಲ. ಅವರ ಅಧಿಕಾರಿಗಳೆಲ್ಲಾ ತಿರುಗಿ ಬೀಳುವವರೇ.


ಯೆಹೂದರೊಂದಿಗೆ ಯೆಹೋವ ದೇವರು ಆಪಾದನೆ ಮಾಡಿ, ಯಾಕೋಬನನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ, ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ, ಅವನಿಗೆ ಪ್ರತಿಫಲವನ್ನು ಕೊಡುವರು.


“ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು