Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:4 - ಕನ್ನಡ ಸಮಕಾಲಿಕ ಅನುವಾದ

4 ಅವರೆಲ್ಲರು ವ್ಯಭಿಚಾರಿಗಳು, ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸುವ ಒಲೆಗೆ ಸಮಾನರಾಗಿದ್ದಾರೆ. ಅವನು ಹಿಟ್ಟು ನಾದಿದ ಮೇಲೆ, ಅದು ಹುಳಿಯಾಗುವ ತನಕ ಉರಿಸದೆ ಬಿಟ್ಟಿರುವ ಕೆಂಡಕ್ಕೆ ಸಮಾನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬೆಂಕಿ ಹೊತ್ತಿಸಿ ಉರಿಸಿ ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರೊಟ್ಟಿಯನ್ನು ಸುಡಲು ರೊಟ್ಟಿಗಾರನು ಹಿಟ್ಟನ್ನು ನಾದುವನು. ರೊಟ್ಟಿಯು ಶಾಖದಿಂದ ಉಬ್ಬುತ್ತಿರುವಾಗ ರೊಟ್ಟಿಗಾರನು ಒಲೆಯನ್ನು ಮತ್ತಷ್ಟು ಉರಿಸುವುದಿಲ್ಲ. ಇಸ್ರೇಲರಾದರೋ ಹಾಗಲ್ಲ, ಅವರು ಒಲೆಯನ್ನು ಮತ್ತಷ್ಟು ಉರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:4
10 ತಿಳಿವುಗಳ ಹೋಲಿಕೆ  

ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.


“ಏಕೆಂದರೆ ಅವರು ತಿಂದರೂ ಸಾಕಾಗುವುದಿಲ್ಲ. ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿ ಆಗುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರನ್ನೇ ಬಿಟ್ಟುಬಿಟ್ಟಿದ್ದಾರೆ.


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು