Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 7:5 - ಕನ್ನಡ ಸಮಕಾಲಿಕ ಅನುವಾದ

5 ನಮ್ಮ ಅರಸನ ಹಬ್ಬದ ದಿವಸಗಳಲ್ಲಿ ರಾಜಕುಮಾರರು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುತ್ತಾರೆ. ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮ ರಾಜನ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಮ್ಮ ರಾಜನ ವರ್ಧಂತಿಯ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ಅರಸನ ದಿವಸದಲ್ಲಿ ನಾಯಕರು ಅತಿಯಾಗಿ ಕುಡಿದು ರೋಗಗ್ರಸ್ತರಾಗುವರು. ಅವರು ದ್ರಾಕ್ಷಾರಸದಿಂದ ಅಮಲೇರಿದವರಾಗಿ ದೇವರನ್ನು ಅಪಹಾಸ್ಯಮಾಡುವ ಜನರೊಂದಿಗೆ ಒಪ್ಪಂದ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 7:5
20 ತಿಳಿವುಗಳ ಹೋಲಿಕೆ  

ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,


ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು.


ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.


ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.


ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ.


ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,


ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಹೇಳಿದ ಮಾತನ್ನು ಕೇಳಿದಾಗ, ಅವನು ಪೀಠದ ಬಳಿಯಿಂದ ತನ್ನ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳೆದುಕೊಳ್ಳದ ಹಾಗೆ ಒಣಗಿ ಹೋಯಿತು.


ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೂ ಔತಣವನ್ನು ಮಾಡಿಸಿ, ಮುಖ್ಯ ಪಾನದಾಯಕನನ್ನು ಮತ್ತು ಮುಖ್ಯ ರೊಟ್ಟಿಗಾರನನ್ನು ತನ್ನ ಅಧಿಕಾರಿಗಳ ಮುಂದೆ ನಿಲ್ಲಿಸಿದನು.


ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನರನ್ನು ಆಳುವ ಹಾಸ್ಯದ ಜನರಾದ ನೀವು ಯೆಹೋವ ದೇವರ ಮಾತನ್ನು ಕೇಳಿರಿ.


“ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು