Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 8:7 - ಕನ್ನಡ ಸಮಕಾಲಿಕ ಅನುವಾದ

7 “ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 8:7
22 ತಿಳಿವುಗಳ ಹೋಲಿಕೆ  

ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.


ನಾನು ಕಂಡ ಹಾಗೆ ಕೆಟ್ಟತನವನ್ನು ಊಳುವವರೂ ದುಷ್ಟತನವನ್ನು ಬಿತ್ತುವವರೂ ಅದನ್ನೇ ಕೊಯ್ಯುವರು.


ಮೋಸಹೋಗಬೇಡಿರಿ, ದೇವರು ಪರಿಹಾಸ್ಯಕ್ಕೆ ಒಳಗಾಗುವವರಲ್ಲ. ಏಕೆಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.


ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ. ಅದು ಅವನಿಗೆ ಗೊತ್ತಿಲ್ಲ. ನರೆಕೂದಲು ಸಹ ಅವನ ಮೇಲೆ ಇದೆ. ಆದರೂ ಅವನು ತಿಳಿಯದೇ ಇದ್ದಾನೆ.


“ಆದ್ದರಿಂದ ನಾನು ತಿರುಗಿಕೊಂಡು, ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ, ನನ್ನ ದ್ರಾಕ್ಷಾರಸವನ್ನು ಅದರ ಸುಗ್ಗಿಯ ಸಮಯದಲ್ಲಿಯೂ ತೆಗೆದ ಹಾಗೆ, ಅವಳ ಬೆತ್ತಲೆತನವನ್ನು ಮುಚ್ಚವುದಕ್ಕಿದ್ದ ನನ್ನ ಉಣ್ಣೆಯನ್ನೂ, ನನ್ನ ನಾರುಬಟ್ಟೆಯನ್ನೂ ತೆಗೆದುಕೊಳ್ಳುವೆನು.


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.


ಬೆಳೆಸಲು ಸಸಿಯನ್ನು ಹಾಕಿದ ದಿನದಲ್ಲಿ ಬೇಲಿಹಾಕಿ ಮತ್ತು ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆಯುವಂತೆ ಮಾಡಿದರೂ, ರೋಗದ ಹಾಗೂ ಗುಣಪಡಿಸಲಾರದ ಬೇನೆಯ ದಿನದಲ್ಲಿ ನಿನ್ನ ಸುಗ್ಗಿ ಏನೂ ಇರುವುದಿಲ್ಲ.


ಇದು ಕೂಡ ವ್ಯಸನಕರವಾದ ಕೇಡು: ಮನುಷ್ಯನು ಹೇಗೆ ಬಂದನೋ, ಹಾಗೆಯೇ ಹೋಗುವನು. ಗಾಳಿಗಾಗಿ ಪ್ರಯಾಸಪಟ್ಟವನಿಗೆ ಲಾಭವೇನಿದೆ?


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.


ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.


ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!


ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.


ಎಫ್ರಾಯೀಮು ಹೊಡೆತಕ್ಕೆ ಒಳಗಾಗಿದೆ. ಅವರ ಬೇರು ಒಣಗಿಹೋಗಿದೆ, ಅವರು ಫಲವನ್ನು ಕೊಡುವುದಿಲ್ಲ, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.


ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”


ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು