Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 9:7 - ಕನ್ನಡ ಸಮಕಾಲಿಕ ಅನುವಾದ

7 ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 9:7
40 ತಿಳಿವುಗಳ ಹೋಲಿಕೆ  

ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.


ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು.


ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ ನಿಮಗೆ ಕಷ್ಟ!


ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.


ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ನಮಗೆ ಬುದ್ಧಿ ಭ್ರಮಣೆಯಾಗಿದ್ದರೆ, ಅದು ದೇವರಿಗಾಗಿಯೇ. ನಾವು ಸ್ವಸ್ಥಬುದ್ಧಿಯುಳ್ಳವರಾಗಿದ್ದರೆ, ಅದು ನಿಮಗಾಗಿಯೇ.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.


“ ‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ.


‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.


ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು.


ಅವಳ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರೂ ವಿಶ್ವಾಸದ್ರೋಹಿಗಳೂ ಆಗಿದ್ದಾರೆ. ಅವಳ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರಮಾಡುತ್ತಾರೆ, ದೈವನಿಯಮವನ್ನು ಭಂಗಪಡಿಸುತ್ತಾರೆ.


ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.


ನನ್ನ ದೇವರೊಂದಿಗೆ ಪ್ರವಾದಿಯು ಎಫ್ರಾಯೀಮನ ಮೇಲೆ ಕಾವಲುಗಾರನಾಗಿದ್ದಾನೆ, ಆದರೂ ಅವನ ಮಾರ್ಗಗಳಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ ಮತ್ತು ಅವನ ದೇವರ ಮನೆಯಲ್ಲಿ ದ್ವೇಷವಿದೆ.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಕರುಗಳಂತಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಏಕೆಂದರೆ ಅವರ ಆಪತ್ತಿನ ದಿವಸವೂ, ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.


ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”


ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.


ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, ‘ಸಮಾಧಾನ, ಸಮಾಧಾನ,’ ಎಂದು ಹೇಳುತ್ತಾರೆ.


ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ


ಏಕೆಂದರೆ ಅದು ಯೆಹೋವ ದೇವರು ಮುಯ್ಯಿ ತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.


ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


ಎಫ್ರಾಯೀಮು ಗದರಿಸುವ ದಿವಸದಲ್ಲೇ ಹಾಳಾಗುವುದು. ಇಸ್ರಾಯೇಲಿನ ಗೋತ್ರಗಳಲ್ಲಿ ನಾನು ನಿಶ್ಚಯವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು