Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:12 - ಪರಿಶುದ್ದ ಬೈಬಲ್‌

12 ನಿನ್ನ ಜೀವ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವ ಅಪಾಯದಲ್ಲಿರುವಂತಿದೆ. ಆದರೆ ನೀನು ನಿನ್ನನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂಬುದನ್ನು ನಾನು ನಿನಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈಗ ನಿನ್ನ ಮತ್ತು ನಿನ್ನ ಮಗ ಸೊಲೊಮೋನನ ಜೀವವನ್ನು ಉಳಿಸಿಕೊಳ್ಳಬೇಕಾದರೆ ನನ್ನ ಆಲೋಚನೆಯನ್ನು ಕೇಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ನೀನು ನಿನ್ನ ಪ್ರಾಣವನ್ನೂ, ನಿನ್ನ ಮಗ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ, ನಿನಗೆ ಆಲೋಚನೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:12
14 ತಿಳಿವುಗಳ ಹೋಲಿಕೆ  

ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು.


“ಆದರೆ ರೈತರು ಮಗನನ್ನು ನೋಡಿದಾಗ, ‘ಇವನು ತೋಟದ ಒಡೆಯನ ಮಗನು. ಈ ತೋಟ ಇವನದಾಗುವುದು. ನಾವು ಇವನನ್ನು ಕೊಂದರೆ, ಈ ತೋಟ ನಮ್ಮದಾಗುವುದು’ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಅದಕ್ಕೆ ಯೆರೆಮೀಯನು, “ನಾನು ಉತ್ತರಕೊಟ್ಟರೆ ನೀನು ಬಹುಶಃ ನನ್ನನ್ನು ಕೊಂದುಬಿಡುವೆ, ಸಲಹೆ ಕೊಟ್ಟರೆ ನೀನು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳುವದಿಲ್ಲ” ಎಂದು ಹೇಳಿದನು.


ಪರಿಮಳತೈಲ ಮತ್ತು ಧೂಪ ನಿನ್ನನ್ನು ಸಂತೋಷಗೊಳಿಸುತ್ತವೆ; ಆದರೆ ಸ್ನೇಹಿತನ ಮಧುರವಾದ ಉಪದೇಶದಿಂದ ಸ್ವಂತ ನಿರ್ಧಾರಕ್ಕಿಂತಲೂ ಹೆಚ್ಚು ಆನಂದವಾಗುವುದು.


ಒಳ್ಳೆಯ ಸಮಾಲೋಚನೆಗಳೊಡನೆ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ. ನೀನು ಯುದ್ಧವನ್ನು ಆರಂಭಿಸುವುದಾಗಿದ್ದರೆ, ಮಾರ್ಗದರ್ಶನಕ್ಕಾಗಿ ಒಳ್ಳೆಯವರನ್ನು ಹುಡುಕು.


ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ.


ಜ್ಞಾನದ ಮಾರ್ಗದರ್ಶನವಿಲ್ಲದ ದೇಶವು ಬಿದ್ದುಹೋಗುವುದು. ಆದರೆ ಒಳ್ಳೆಯ ಸಲಹೆಗಾರರನ್ನು ಹೊಂದಿರುವ ದೇಶವು ಕ್ಷೇಮವಾಗಿರುವುದು.


ಅತಲ್ಯಳು ಅಹಜ್ಯನ ತಾಯಿ. ತನ್ನ ಮಗನು ಸತ್ತನೆಂಬ ವರ್ತಮಾನ ಸಿಕ್ಕದ ಕೂಡಲೇ ಆಕೆ ಯೆಹೂದದಲ್ಲಿದ್ದ ಎಲ್ಲಾ ರಾಜಕುಮಾರರನ್ನು ಕೊಲ್ಲಿಸಿದಳು.


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನನ್ನು ಬಲಪಡಿಸಿಕೊಂಡನು. ನಂತರ ತನ್ನ ತಮ್ಮಂದಿರನ್ನೆಲ್ಲಾ ಖಡ್ಗದಿಂದ ಹತಿಸಿದನು. ಮಾತ್ರವಲ್ಲದೆ ಇಸ್ರೇಲಿನ ಕೆಲವು ಪ್ರಧಾನರನ್ನು ಕೊಲ್ಲಿಸಿದನು.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.


ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಸೊಲೊಮೋನನನ್ನು ಮತ್ತು ನನ್ನನ್ನು ಅಪರಾಧಿಗಳೆಂದು ಜನರೆಲ್ಲರೂ ಹೇಳುವರು” ಎಂದು ಹೇಳಿದಳು.


ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾಮ.


ಅವರು ನಗರದ ಹೊರಕ್ಕೆ ಬಂದ ಮೇಲೆ ಆ ಪುರುಷರಲ್ಲಿ ಒಬ್ಬನು, “ಈಗ ಓಡಿಹೋಗಿ ನಿಮ್ಮ ಪ್ರಾಣವನ್ನು ಕಾಪಾಡಿಕೊಳ್ಳಿ; ನಗರದ ಕಡೆಗೆ ತಿರುಗಿ ನೋಡಬೇಡಿ; ಕಣಿವೆಯ ಯಾವ ಸ್ಥಳದಲ್ಲೂ ನಿಂತುಕೊಳ್ಳಬೇಡಿ; ತಪ್ಪಿಸಿಕೊಂಡು ಬೆಟ್ಟಗಳಿಗೆ ಓಡಿಹೋಗಿರಿ; ಇಲ್ಲವಾದರೆ, ಈ ನಗರದೊಡನೆ ನೀವೂ ನಾಶವಾಗುವಿರಿ” ಎಂದು ಹೇಳಿದನು.


ರಾಜನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ನನ್ನ ಒಡೆಯನಾದ ರಾಜನೇ, ನನ್ನ ಮಗನಾದ ಸೊಲೊಮೋನನು ನಿನ್ನ ನಂತರದ ರಾಜನೆಂದು ನೀನು ನನಗೆ ವಾಗ್ದಾನ ಮಾಡಿದ್ದೆ. ಹೀಗಿರುವಾಗ ಅದೋನೀಯನು ನೂತನ ರಾಜನಾದದ್ದು ಏಕೆ?’ ಎಂದು ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು