Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:29 - ಪರಿಶುದ್ದ ಬೈಬಲ್‌

29 ಆಗ ರಾಜನು ಈ ಪ್ರಮಾಣವನ್ನು ಮಾಡಿದನು: “ದೇವರಾದ ಯೆಹೋವನು ನನ್ನನ್ನು ಎಲ್ಲಾ ತೊಂದರೆಗಳಿಂದ ರಕ್ಷಿಸಿದನು. ದೇವರಾಣೆಯಾಗಿಯೂ ನಾನು ನಿನಗೆ ಈ ಪ್ರಮಾಣವನ್ನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅರಸನು ಆಕೆಗೆ, “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಸರ್ವೇಶ್ವರನಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅರಸನು ಆಕೆಗೆ, “ನಿಶ್ಚಯವಾಗಿ, ನಿನ್ನ ಮಗ ಸೊಲೊಮೋನನು ನನ್ನ ತರುವಾಯ ಆಳುವನೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:29
19 ತಿಳಿವುಗಳ ಹೋಲಿಕೆ  

ದಾವೀದನು ರಿಮ್ಮೋನನ ಮಕ್ಕಳಾದ ರೇಕಾಬನಿಗೂ ಅವನ ಸೋದರನಾದ ಬಾಣನಿಗೂ, “ಯೆಹೋವನಾಣೆಯಾಗಿಯೂ ಆತನು ಎಲ್ಲಾ ಕೇಡುಗಳಿಂದ ನನ್ನನ್ನು ರಕ್ಷಿಸಿದನು.


ಆತನು ನಮ್ಮನ್ನು ನಮ್ಮ ಶತ್ರುಗಳಿಂದ ರಕ್ಷಿಸಿದನು. ಆತನ ಪ್ರೀತಿ ಶಾಶ್ವತವಾದದ್ದು.


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


ಕ್ರೂರಿಗಳಿಂದ ಅವರನ್ನು ತಪ್ಪಿಸಿ ರಕ್ಷಿಸುವನು. ಆ ಬಡವರ ಜೀವಗಳು ರಾಜನಿಗೆ ಅಮೂಲ್ಯವಾಗಿವೆ.


ಆದರೆ ದೇವಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು, “ನೋಡು, ಅರಾಮ್ಯನಾದ ನಾಮಾನನು ತಂದಿದ್ದ ಕಾಣಿಕೆಯನ್ನು ಸ್ವೀಕರಿಸದೆ ನನ್ನ ಒಡೆಯನಾದ ಎಲೀಷನು ಅವನನ್ನು ಕಳುಹಿಸಿಬಿಟ್ಟನು! ಯೆಹೋವನಾಣೆಯಾಗಿ, ನಾನು ನಾಮಾನನ ಹಿಂದೆ ಓಡಿಹೋಗಿ ಅವನಿಂದ ಏನನ್ನಾದರೂ ಪಡೆಯುತ್ತೇನೆ!” ಎಂದು ತನ್ನೊಳಗೆ ಅಂದುಕೊಂಡು,


ಆದರೆ ಎಲೀಷನು, “ನಾನು ಯೆಹೋವನ ಸೇವೆ ಮಾಡುತ್ತೇನೆ. ಯೆಹೋವನಾಣೆಯಾಗಿ ಪ್ರಮಾಣ ಮಾಡುತ್ತೇನೆ, ನಾನು ಯಾವ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದನು. ಎಲೀಷನು ಕಾಣಿಕೆಯನ್ನು ಸ್ವೀಕರಿಸುವಂತೆ ನಾಮಾನನು ಬಹಳ ಪ್ರಯತ್ನಿಸಿದನು. ಆದರೆ ಎಲೀಷನು ನಿರಾಕರಿಸಿದನು.


ಆದರೆ ಮಗುವಿನ ತಾಯಿಯು, “ಯೆಹೋವನಾಣೆ, ನಿನ್ನಾಣೆ, ನಿನ್ನನ್ನು ಬಿಟ್ಟು ನಾನು ಹೋಗುವುದಿಲ್ಲ” ಎಂದು ಹೇಳಿದಳು. ಎಲೀಷನು ಮೇಲೆದ್ದು ಶೂನೇಮಿನ ಆ ಸ್ತ್ರೀಯನ್ನು ಹಿಂಬಾಲಿಸಿದನು.


ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಯೆಹೋವನು ನನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದನು. ನನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಆತನು ನನಗೆ ದಯಪಾಲಿಸಿದನು. ಯೆಹೋವನು ತನ್ನ ವಾಗ್ದಾನದಂತೆ, ನನಗೆ ಮತ್ತು ನನ್ನ ವಂಶಿಕರಿಗೆ ರಾಜ್ಯಾಧಿಕಾರವನ್ನು ನೀಡಿದನು. ಅದೋನೀಯನು ಈ ದಿನವೇ ಸಾಯಬೇಕು ಎಂದು ನಾನು ಈ ಎಲ್ಲಾ ಕಾರ್ಯಗಳನ್ನು ನೆರವೇರಿಸಿದ ದೇವರ ಸನ್ನಿಧಿಯಲ್ಲಿ ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು.


ದಾವೀದನು ಶ್ರೀಮಂತನ ಮೇಲೆ ಬಹಳ ಕೋಪಗೊಂಡನು. ಅವನು ನಾತಾನನಿಗೆ, “ಯೆಹೋವನ ಆಣೆಯಾಗಿ ಈ ಕಾರ್ಯವನ್ನು ಮಾಡಿದ ಮನುಷ್ಯನು ಸಾಯಲೇಬೇಕು!


ನಂತರ ಆ ಬಾಣಗಳನ್ನು ಹುಡುಕಿಕೊಂಡು ಬರಲು ಹುಡುಗನನ್ನು ಕಳುಹಿಸುತ್ತೇನೆ. ಎಲ್ಲವೂ ಒಳಿತಾಗಿದ್ದರೆ ನಾನು ಆ ಹುಡುಗನಿಗೆ, ‘ನೀನು ಬಹು ದೂರ ಹೋಗಿರುವೆ! ಬಾಣಗಳು ನನ್ನ ಹತ್ತಿರದಲ್ಲೇ ಇವೆ. ಹಿಂತಿರುಗಿಬಂದು ಅವುಗಳನ್ನು ತೆಗೆದುಕೋ’ ಎಂದು ಹೇಳುತ್ತೇನೆ. ನಾನು ಆ ರೀತಿ ಹೇಳಿದರೆ, ನೀನು ಅಡಗಿದ್ದ ಸ್ಥಳದಿಂದ ಹೊರಗೆ ಬಾ. ಯೆಹೋವನಾಣೆ, ನೀನು ಸುರಕ್ಷಿತನಾಗಿರುವೆ. ನಿನಗೆ ಯಾವ ಅಪಾಯವೂ ಇಲ್ಲ.


ಯೋನಾತಾನನು ಹೇಳಿದ್ದನ್ನೆಲ್ಲ ಸೌಲನು ಕೇಳಿ, “ಯೆಹೋವನಾಣೆ, ದಾವೀದನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣ ಮಾಡಿ ಹೇಳಿದನು.


ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.


ಇಸ್ರೇಲನ್ನು ರಕ್ಷಿಸುವ ಯೆಹೋವನಾಣೆಯಿಟ್ಟು ಹೇಳುತ್ತಿದ್ದೇನೆ, ನನ್ನ ಸ್ವಂತ ಮಗನಾದ ಯೋನಾತಾನನೇ ಈ ಪಾಪ ಮಾಡಿದ್ದರೂ ಅವನು ಸಾಯಲೇಬೇಕು” ಎಂದು ಹೇಳಿದನು. ಜನರಲ್ಲಿ ಯಾರೊಬ್ಬರೂ ಮಾತನಾಡಲಿಲ್ಲ.


ಗಿದ್ಯೋನನು, “ಆ ಜನರು ನನ್ನ ಸಹೋದರರಾಗಿದ್ದರು. ಅವರು ನನ್ನ ತಾಯಿಯ ಮಕ್ಕಳು! ಯೆಹೋವನ ಮೇಲೆ ಆಣೆಮಾಡಿ ಹೇಳುತ್ತೇನೆ, ನೀವು ಅವರನ್ನು ಕೊಲ್ಲದೆ ಇದಿದ್ದರೆ ನಾನು ಈಗ ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿದನು.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ಆಗ ರಾಜನಾದ ದಾವೀದನು, “ಒಳಗೆ ಬರಲು ಬತ್ಷೆಬೆಳಿಗೆ ಹೇಳಿ!” ಎಂದು ಹೇಳಿದನು. ಬತ್ಷೆಬೆಳು ರಾಜನ ಎದುರಿಗೆ ಬಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು