Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 1:33 - ಪರಿಶುದ್ದ ಬೈಬಲ್‌

33 ಆಗ ರಾಜನು ಅವರಿಗೆ, “ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅವರು ಅರಸನ ಸನ್ನಿಧಿಗೆ ಬರಲು ಅರಸನು ಅವರಿಗೆ - ನೀವು ನನ್ನ ಸೇವಕರನ್ನು ಕರಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅರಸನು ಅವರಿಗೆ, “ನೀವು ನಿಮ್ಮ ಯಜಮಾನನ ಸೇವಕರನ್ನು ಕರೆದುಕೊಂಡು ಹೋಗಿ ನನ್ನ ಮಗ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವನನ್ನು ಕರೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 1:33
12 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಗೀಹೋನ್ ಬುಗ್ಗೆಯನ್ನು ತಡೆದು ಆ ನೀರು ಪಶ್ಚಿಮದ ಕಡೆಯಲ್ಲಿದ್ದ ದಾವೀದ ನಗರಕ್ಕೆ ನೇರವಾಗಿ ಇಳಿದು ಬರುವಂತೆ ಮಾಡಿದನು. ಅವನು ಕೈಹಾಕಿದ ಕಾರ್ಯಗಳೆಲ್ಲವೂ ಸಫಲವಾದವು.


ಚಾದೋಕನು, ನಾತಾನನು, ಬೆನಾಯನು ಮತ್ತು ರಾಜನ ಅಧಿಕಾರಿಗಳು ರಾಜನಾದ ದಾವೀದನಿಗೆ ವಿಧೇಯರಾದರು. ಅವರು ಸೊಲೊಮೋನನನ್ನು ರಾಜನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ, ಅವನೊಂದಿಗೆ ಗೀಹೋನಿಗೆ ಹೋದರು.


ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಈ ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತುಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು;


ರಾಜನಾದ ದಾವೀದನ ಮಗನಾದ ಅದೋನೀಯನು ಬಹಳ ಗರ್ವಿಷ್ಠನಾದನು. ಅವನು, “ನಾನೇ ರಾಜನಾಗುತ್ತೇನೆ” ಎಂದು ಹೇಳಿಕೊಂಡನು. (ಅದೋನೀಯನ ತಾಯಿಯ ಹೆಸರು ಹಗ್ಗೀತ.) ಅದೋನೀಯನು ರಾಜನಾಗಬೇಕೆಂಬುದಾಗಿ ಬಹಳ ಆಸೆಪಟ್ಟನು. ಆದ್ದರಿಂದ ಅವನು ತನಗಾಗಿ ಒಂದು ರಥವನ್ನು, ಕುದುರೆಗಳನ್ನು ಮತ್ತು ರಥದ ಮುಂದೆ ಓಡುವಂತಹ ಐವತ್ತು ಜನರನ್ನು ಪಡೆದನು.


“ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಬೇಕು. ಎರಡು ಬೇರೆ ಜಾತಿಯ ಪಶುಗಳನ್ನು ಒಟ್ಟಿಗೆ ಸೇರಿಸಿ ಈಯಿಸಬಾರದು. ನಿಮ್ಮ ಹೊಲಗಳಲ್ಲಿ ಎರಡು ವಿಧದ ಬೀಜಗಳನ್ನು ಬಿತ್ತಬಾರದು. ಎರಡು ವಿಧದ ದಾರಗಳನ್ನು ಸೇರಿಸಿ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳಬಾರದು.


ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.


ಅಬ್ಷಾಲೋಮನ ಸೇವಕರು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದುಬಿಟ್ಟರು. ಆದರೆ ದಾವೀದನ ಇತರ ಗಂಡುಮಕ್ಕಳೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನೇರಿ ತಪ್ಪಿಸಿಕೊಂಡರು.


ಆ ದಿವಸ ಸೇರಿಬಂದ ಜನರು ಯೆಹೋವನ ಸನ್ನಿಧಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಉಲ್ಲಾಸಿಸಿದರು. ಅವರು ದಾವೀದನ ಮಗನಾದ ಸೊಲೊಮೋನನನ್ನು ತಿರಿಗಿ ಅರಸನನ್ನಾಗಿಯೂ ಚಾದೋಕನನ್ನು ಮಹಾಯಾಜಕನನ್ನಾಗಿಯೂ ಯೆಹೋವನ ಸನ್ನಿಧಿಯಲ್ಲಿ ಅಭಿಷೇಕಿಸಿದರು.


ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು