Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:11 - ಪರಿಶುದ್ದ ಬೈಬಲ್‌

11 ಆದ್ದರಿಂದ ಯೆಹೋವನು ಸೊಲೊಮೋನನಿಗೆ, “ನಮ್ಮಿಬ್ಬರ ನಡುವೆಯಿದ್ದ ಒಡಂಬಡಿಕೆಯನ್ನು ಮೀರಿಬಿಟ್ಟೆ. ನೀನು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ಆದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕರಲ್ಲಿ ಒಬ್ಬನಿಗೆ ಅದನ್ನು ಕೊಡುವುದಾಗಿ ನಾನು ಪ್ರಮಾಣ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಅವನಿಗೆ, “ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನಿಗೆ - ನೀನು ಈ ಪ್ರಕಾರ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಯೆಹೋವ ದೇವರು ಸೊಲೊಮೋನನಿಗೆ, “ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳದೆ ಹೋದುದರಿಂದ ನಿಶ್ಚಯವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಿದುಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:11
16 ತಿಳಿವುಗಳ ಹೋಲಿಕೆ  

ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ತುಂಡುಗಳನ್ನು ನಿನಗೋಸ್ಕರವಾಗಿ ತೆಗೆದುಕೋ. ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ತುಂಡುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ.


ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.


ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆ ಎಂಬುದು ಇಸ್ರೇಲಿನ ಜನರೆಲ್ಲರಿಗೂ ತಿಳಿಯಿತು. ಅವರು ಅವನನ್ನು ಒಂದು ಸಭೆಗೆ ಕರೆಸಿ, ಅವನನ್ನು ಇಸ್ರೇಲಿನ ರಾಜನನ್ನಾಗಿ ನೇಮಿಸಿದರು. ಯೆಹೂದಕುಲವೊಂದು ಮಾತ್ರ ದಾವೀದನ ಕುಟುಂಬವನ್ನು ಅನುಸರಿಸಿತು.


“ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಈ ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು.


ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ. ನನ್ನನ್ನು ತಿರಸ್ಕರಿಸಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.


ಆದರೆ ನಿನ್ನ ತಂದೆಯಾದ ದಾವೀದನನ್ನು ನಾನು ಪ್ರೀತಿಸಿದ್ದರಿಂದ ನೀನು ಜೀವಂತವಾಗಿರುವಾಗಲೇ ನಿನ್ನ ರಾಜ್ಯವನ್ನು ನಿನ್ನಿಂದ ನಾನು ತೆಗೆದುಕೊಳ್ಳುವುದಿಲ್ಲ. ನಿನ್ನ ಮಗನು ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಅದನ್ನು ಅವನಿಂದ ತೆಗೆದುಕೊಳ್ಳುತ್ತೇನೆ.


ಸೊಲೊಮೋನನ ಸೇವಕರಲ್ಲಿ ನೆಬಾಟನ ಮಗನಾದ ಯಾರೊಬ್ಬಾಮನೂ ಒಬ್ಬನಾಗಿದ್ದನು. ಯಾರೊಬ್ಬಾಮನು ಎಫ್ರಾಯೀಮ್ ಕುಲದವನು, ಅವನು ಚರೇದ ಪಟ್ಟಣದವನು. ಯಾರೊಬ್ಬಾಮನ ತಾಯಿಯ ಹೆಸರು ಜೆರೂಗ, ಆಕೆ ವಿಧವೆಯಾಗಿದ್ದಳು. ಯಾರೊಬ್ಬಾಮನು ರಾಜನ ವಿರುದ್ಧ ತಿರುಗಿಬಿದ್ದನು.


ಒಂದು ದಿನ ಯಾರೊಬ್ಬಾಮನು ಜೆರುಸಲೇಮಿನ ಹೊರಗೆ ಹೋಗುತ್ತಿದ್ದನು. ಶೀಲೋವಿನ ಪ್ರವಾದಿಯಾದ ಅಹೀಯನು ಅವನನ್ನು ರಸ್ತೆಯಲ್ಲಿ ಸಂಧಿಸಿದನು. ಅಹೀಯನು ಹೊಸ ಅಂಗಿಯನ್ನು ಧರಿಸಿದ್ದನು. ನಿರ್ಜನವಾಗಿದ್ದ ಆ ದೇಶದಲ್ಲಿ ಇವರಿಬ್ಬರೇ ಇದ್ದರು.


ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.


ದೇವರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಅವರು ಪಾಲಿಸಲಿಲ್ಲ. ಅವರು ಆತನ ಉಪದೇಶಗಳಿಗೆ ವಿಧೇಯರಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು