Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:13 - ಪರಿಶುದ್ದ ಬೈಬಲ್‌

13 ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಒಬ್ಬ ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ಆ ನಗರವನ್ನು ಆರಿಸಿಕೊಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು. ಆದರೆ ರಾಜ್ಯವನ್ನೆಲ್ಲಾ ಕಿತ್ತು ಕೊಳ್ಳುವದಿಲ್ಲ; ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್‍ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:13
32 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆ ಎಂಬುದು ಇಸ್ರೇಲಿನ ಜನರೆಲ್ಲರಿಗೂ ತಿಳಿಯಿತು. ಅವರು ಅವನನ್ನು ಒಂದು ಸಭೆಗೆ ಕರೆಸಿ, ಅವನನ್ನು ಇಸ್ರೇಲಿನ ರಾಜನನ್ನಾಗಿ ನೇಮಿಸಿದರು. ಯೆಹೂದಕುಲವೊಂದು ಮಾತ್ರ ದಾವೀದನ ಕುಟುಂಬವನ್ನು ಅನುಸರಿಸಿತು.


ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ಜೆರುಸಲೇಮ್ ನಗರವು ಜನರ ಹೊಗಳಿಕೆಗೆ ಪಾತ್ರವಾಗುವಂತೆ ಯೆಹೋವನು ಮಾಡುವ ತನಕ ನೀವು ಆತನಿಗೆ ಪ್ರಾರ್ಥಿಸುತ್ತಿರಬೇಕು.


ಚೀಯೋನನ್ನು ನಾನು ಪ್ರೀತಿಸುತ್ತೇನೆ. ಆಕೆಯ ವಿಷಯವಾಗಿ ನಾನು ಮಾತಾಡುತ್ತಲೇ ಇರುವೆನು. ನಾನು ಜೆರುಸಲೇಮನ್ನು ಪ್ರೀತಿಸುತ್ತೇನೆ. ಅದರ ವಿಷಯವಾಗಿ ಮಾತನಾಡುವದನ್ನು ನಾನು ನಿಲ್ಲಿಸುವದಿಲ್ಲ. ಧರ್ಮವು ಬೆಳಕಿನಂತೆ ಪ್ರಕಾಶಿಸುವ ತನಕ ನಾನು ಮಾತನಾಡುವೆನು. ರಕ್ಷಣೆಯು ಬೆಂಕಿಯಂತೆ ಪ್ರಜ್ವಲಿಸುವವರೆಗೆ ನಾನು ಮಾತನಾಡುವೆನು.


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.


ಯೆಹೋವನೇ, ದಾವೀದನು ಅನುಭವಿಸಿದ ಕಷ್ಟವನ್ನು ಜ್ಞಾಪಿಸಿಕೋ.


ಯೆಹೋವನೇ, ಹಿಂದಿನಕಾಲದಲ್ಲಿ ನೀನು ತೋರಿದ ಪ್ರೀತಿ ಎಲ್ಲಿ ಹೋಯಿತು? ದಾವೀದ ಕುಟುಂಬಕ್ಕೆ ನಂಬಿಗಸ್ತನಾಗಿರುತ್ತೇನೆಂದು ನೀನು ವಾಗ್ದಾನ ಮಾಡಿದೆಯಲ್ಲಾ!


ಯೆಹೋವನು, “ನಾನು ಇಸ್ರೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು. ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮ ಮಹತ್ತಿಗಾಗಿ ಸ್ವೀಕರಿಸಿಕೊಂಡ ದೇವಾಲಯವನ್ನೂ ತಿರಸ್ಕರಿಸುವೆನು” ಎಂದು ಹೇಳಿದನು.


ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)


ನಾನು ಈ ನಗರವನ್ನು ಕಾಪಾಡುತ್ತೇನೆ ಮತ್ತು ಇದನ್ನು ರಕ್ಷಿಸುತ್ತೇನೆ. ನನಗಾಗಿಯೂ ನನ್ನ ಸೇವಕನಾದ ದಾವೀದನಿಗಾಗಿಯೂ ನಾನು ಇದನ್ನು ಮಾಡುತ್ತೇನೆ.’”


ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.


ಸೊಲೊಮೋನನು ಮಾಡಿದ ಕಾರ್ಯಗಳ ನಿಮಿತ್ತ ನಾನು ದಾವೀದನ ಮಕ್ಕಳನ್ನು ದಂಡಿಸುತ್ತೇನೆ. ಆದರೆ ನನ್ನ ದಂಡನೆಯು ಅವರ ಮೇಲೆ ಶಾಶ್ವತವಾಗಿರುವುದಿಲ್ಲ” ಎಂದು ಹೇಳಿದನು.


ನೀವು ಉತ್ತಮ ರೀತಿಯಲ್ಲಿ ಜೀವಿಸುವಿರಿ ಎಂದು ದೇವರು ನಿಮಗೆ ಆ ದೇಶವನ್ನು ಕೊಡುವುದಿಲ್ಲ. ಅವರು ಕೆಟ್ಟದ್ದಾಗಿ ಜೀವಿಸುತ್ತಿರುವುದರಿಂದ ದೇವರು ಅವರನ್ನು ಹೊರಡಿಸಿ ನೀವು ಆ ದೇಶವನ್ನು ಅನುಭವಿಸುವಂತೆ ಮಾಡಿದನು; ಆತನು ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಟ್ಟಿರುವ ವಾಗ್ದಾನಗಳನ್ನು ನೆರವೇರಿಸುವುದಕ್ಕಾಗಿ ನಿಮಗೆ ಆ ದೇಶವನ್ನು ಕೊಡುವನು.


‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.


ಆ ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು.


ಆದರೆ ರೆಹಬ್ಬಾಮನು ಯೆಹೂದನಗರಗಳಲ್ಲಿ ವಾಸವಾಗಿದ್ದ ಇಸ್ರೇಲರನ್ನು ಆಳಿದನು.


ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!


ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.


ಹೀಗೆ ದಾವೀದನ ಕುಟುಂಬಕ್ಕೆ ವಿರೋಧವಾಗಿ ಇಸ್ರೇಲರು ದಂಗೆ ಎದ್ದರು. ಅವರು ಇಂದಿಗೂ ದಾವೀದನ ಕುಟುಂಬದ ವಿರೋಧಿಗಳಾಗಿದ್ದಾರೆ.


ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು