Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:21 - ಪರಿಶುದ್ದ ಬೈಬಲ್‌

21 ದಾವೀದನು ಸತ್ತುಹೋದನೆಂಬುದು ಹದದನಿಗೆ ಈಜಿಪ್ಟಿನಲ್ಲಿ ತಿಳಿಯಿತು. ಸೈನ್ಯದ ಸೇನಾಪತಿಯಾದ ಯೋವಾಬನು ಸತ್ತನೆಂಬುದೂ ಅವನಿಗೆ ತಿಳಿಯಿತು. ಆದ್ದರಿಂದ ಹದದನು ಫರೋಹನಿಗೆ, “ಸ್ವದೇಶದ ನನ್ನ ಮನೆಗೆ ನನಗೆ ಹೋಗಲು ಬಿಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನನಿಗೆ, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪಣೆ ಕೊಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದಾವೀದನು ಸತ್ತು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಈಜಿಪ್ಟಿನಲ್ಲಿದ್ದ ಹದದನು ಕೇಳಿದನು. ಫರೋಹನಿಗೆ ಅವನು, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ಅಪ್ಪಣೆಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದಾವೀದನು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನಿಗೆ - ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ನನಗೆ ಅಪ್ಪಣೆಕೊಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ದಾವೀದನು ಮರಣ ಹೊಂದಿದನೆಂದೂ, ಸೇನಾಧಿಪತಿಯಾದ ಯೋವಾಬನು ಸತ್ತು ಹೋದನೆಂದೂ, ಹದದನು ಈಜಿಪ್ಟಿನಲ್ಲಿ ಕೇಳಿದಾಗ, ಹದದನು ಫರೋಹನಿಗೆ, “ನಾನು ನನ್ನ ದೇಶಕ್ಕೆ ಹೋಗುವಹಾಗೆ ನನ್ನನ್ನು ಕಳುಹಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:21
10 ತಿಳಿವುಗಳ ಹೋಲಿಕೆ  

ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ದೇವದೂತನು ಅವನಿಗೆ, “ಎದ್ದೇಳು! ಮಗುವನ್ನು ಮತ್ತು ಅದರ ತಾಯಿಯನ್ನು ಕರೆದುಕೊಂಡು ಇಸ್ರೇಲಿಗೆ ಹೋಗು. ಮಗುವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದವರು ಸತ್ತುಹೋದರು” ಎಂದು ಹೇಳಿದನು.


ಆದ್ದರಿಂದ ಯೆಹೋಯಾದಾವನ ಮಗನಾದ ಬೆನಾಯನು ಯೋವಾಬನನ್ನು ಕೊಂದನು. ಯೋವಾಬನನ್ನು ಅರಣ್ಯದಲ್ಲಿನ ಅವನ ಮನೆಯ ಸಮೀಪದಲ್ಲೇ ಸಮಾಧಿ ಮಾಡಿದರು.


ಅಬ್ನೇರನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ನಾನು ಹೋಗಿ ಎಲ್ಲಾ ಇಸ್ರೇಲರನ್ನೂ ನಿನ್ನ ಬಳಿಗೆ ಕರೆತರುತ್ತೇನೆ; ನಂತರ ಅವರು ನಿನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಳ್ಳುತ್ತಾರೆ. ನೀನು ನಿನ್ನ ಇಷ್ಟದಂತೆ ಸಮಸ್ತ ಇಸ್ರೇಲನ್ನು ಆಳಬಹುದು” ಎಂದು ಹೇಳಿದನು. ದಾವೀದನು ಅಬ್ನೇರನನ್ನು ಕಳುಹಿಸಿದನು. ಅಬ್ನೇರನು ಸಮಾಧಾನದಿಂದ ಹೋದನು.


ಮಾರನೆಯ ದಿನ ಬೆಳಗಿನ ಜಾವ, ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು ಎಬ್ಬಿಸಿ, “ಎದ್ದೇಳು, ನಿನ್ನನ್ನು ಕಳುಹಿಸಿಕೊಡುತ್ತೇನೆ” ಎಂದು ಹೇಳಿದನು. ಸೌಲನು ಮೇಲೆದ್ದನು ಮತ್ತು ಸಮುವೇಲನೊಂದಿಗೆ ಮನೆಯಿಂದ ಹೊರಗೆ ಹೊರಟನು.


ಅದಕ್ಕೆ ಅವಳು, “ಹಾಗೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿಕೊಟ್ಟಳು. ಆ ಜನರು ಅವಳ ಮನೆಯಿಂದ ಹೊರಟರು. ಆಗ ಆ ಹೆಂಗಸು ಆ ಕೆಂಪು ಹಗ್ಗವನ್ನು ಕಿಟಿಕಿಗೆ ಕಟ್ಟಿದಳು.


ಮೋಶೆ ಇನ್ನೂ ಮಿದ್ಯಾನಿನಲ್ಲಿದ್ದಾಗ ಯೆಹೋವನು, “ಈಗ ನೀನು ಸುರಕ್ಷಿತವಾಗಿ ಈಜಿಪ್ಟಿಗೆ ಹೋಗಬಹುದು. ನಿನ್ನನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋಗಿದ್ದಾರೆ” ಅಂದನು.


ಅವರು ಹೊರಡುವಾಗ ಯೋಸೇಫನು, “ನೇರವಾಗಿ ಮನೆಗೆ ಹೋಗಿ. ದಾರಿಯಲ್ಲಿ ಜಗಳ ಮಾಡಬೇಡಿ” ಎಂದು ಹೇಳಿದನು.


ತಖ್ಪೆನೇಸಳ ಸೋದರಿಯನ್ನು ಹದದನು ಮದುವೆಯಾದನು. ಅವರಿಗೆ ಗೆನುಬತ್ ಎಂಬ ಹೆಸರಿನ ಮಗನಿದ್ದನು. ಫರೋಹನ ಮನೆಯಲ್ಲಿಯೇ ಅವನ ಮಕ್ಕಳೊಂದಿಗೆ ಗೆನುಬತನೂ ಬೆಳೆಯಲು ರಾಣಿಯಾದ ತಖ್ಪೆನೇಸಳು ಅವಕಾಶಮಾಡಿದಳು.


ಆದರೆ ಫರೋಹನು “ನಿನಗೆ ಬೇಕಾದುದ್ದೆಲ್ಲವನ್ನು ನಾನು ಇಲ್ಲಿ ನಿನಗೆ ಕೊಟ್ಟಿದ್ದೇನೆ! ನೀನು ಸ್ವದೇಶಕ್ಕೆ ಹಿಂದಿರುಗಿ ಹೋಗಲು ಅಪೇಕ್ಷಿಸುತ್ತಿರುವುದಾದರೂ ಏಕೆ?” ಎಂದು ಕೇಳಿದನು. ಹದದನು, “ದಯವಿಟ್ಟು ನನ್ನ ಮನೆಗೆ ನಾನು ಹೋಗಲು ಬಿಡು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು