Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:23 - ಪರಿಶುದ್ದ ಬೈಬಲ್‌

23 ಸೊಲೊಮೋನನಿಗೆ ವಿರುದ್ಧವಾಗಿ ಶತ್ರುವಾಗುವಂತೆ ಇನ್ನೊಬ್ಬ ಮನುಷ್ಯನನ್ನೂ ದೇವರು ಪ್ರೇರೇಪಿಸಿದನು. ಈ ಮನುಷ್ಯನು ಎಲ್ಯಾದಾವನ ಮಗನಾದ ರೆಜೋನ್ ಎಂಬವನು. ರೆಜೋನನು ತನ್ನ ಒಡೆಯನ ಹತ್ತಿರದಿಂದ ಓಡಿಹೋಗಿದ್ದನು. ಚೋಬದ ರಾಜನಾದ ಹದದೆಜೆರನು ಅವನ ಒಡೆಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸೊಲೊಮೋನನಿಗೆ ವಿರುದ್ಧ ದೇವರು ಎಬ್ಬಿಸಿದ ಎರಡನೆಯ ವೈರಿ ಎಲ್ಯಾದಾವನ ಮಗ ರೆಜೋನ್ ಎಂಬವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಸೊಲೊಮೋನನ ಮೇಲೆ ಎಬ್ಬಿಸಿದರು. ಅವನು ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೆಜೆರನನ್ನು ಬಿಟ್ಟು ಓಡಿ ಹೋದ ಎಲ್ಯಾದಾವನ ಮಗನಾದ ರೆಜೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:23
18 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು.


ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.


ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”


ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.


“ಆದರೆ ದೇವರು ಏನು ಹೇಳುತ್ತಾನೆಂದು ಕೇಳಿದೆಯಾ? ಬಹುಕಾಲದ ಹಿಂದೆ ನಾನು ಯೋಜನೆಯನ್ನು ಮಾಡಿದ್ದೆನು. ಪ್ರಾಚೀನ ಕಾಲದಿಂದ ಅದರ ವಿಷಯವಾಗಿ ಆಲೋಚನೆ ಮಾಡಿದ್ದೆನು. ಈಗ ಅದು ನೆರವೇರುವಂತೆ ಮಾಡಿದ್ದೇನೆ. ಬಲಿಷ್ಠವಾದ ನಗರಗಳನ್ನು ನಾಶಮಾಡಿ ಅವುಗಳನ್ನು ಕಲ್ಲಿನ ರಾಶಿಗಳನ್ನಾಗಿ ಮಾಡಲು ನಿನ್ನನ್ನು ಬಿಟ್ಟಿರುತ್ತೇನೆ.


ದೇವರು ಹೇಳುವುದೇನೆಂದರೆ: “ಮೇದ್ಯರ ಸೈನ್ಯವು ಬಾಬಿಲೋನನ್ನು ಮುತ್ತುವಂತೆ ಮಾಡುವೆನು. ಮೇದ್ಯರ ಸೈನ್ಯಕ್ಕೆ ಬೆಳ್ಳಿಬಂಗಾರ ಸುರಿಸಿದರೂ ಅವರು ಬಾಬಿಲೋನಿನ ಮೇಲೆ ಧಾಳಿ ಮಾಡುವದನ್ನು ನಿಲ್ಲಿಸುವದಿಲ್ಲ.


ದೇವರೇ, ನೀನು ನಮ್ಮನ್ನು ಕೋಪದಿಂದ ಕೈಬಿಟ್ಟಿರುವೆ; ನಮ್ಮನ್ನು ನಾಶಗೊಳಿಸಿರುವೆ. ನಮ್ಮನ್ನು ಪುನರ್‌ಸ್ಥಾಪಿಸು.


ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ:


ದಾವೀದನು ತಮಗೆ ಶತ್ರುವಾದನೆಂದು ಅಮ್ಮೋನಿಯರಿಗೆ ತಿಳಿದಾಗ ಹಾನೂನನು ಮೂವತ್ನಾಲ್ಕು ಸಾವಿರ ಕಿಲೋಗ್ರಾಂ ತೂಕದ ಬೆಳ್ಳಿಯನ್ನು ಕೊಟ್ಟು ಮೆಸೊಪೊಟೆಮಿಯಾದಿಂದ ರಥಗಳನ್ನೂ ರಾಹುತರನ್ನೂ ಕೊಂಡುಕೊಂಡನು. ಅಲ್ಲದೆ ಅರಾಮದ ಮಾಕ ಮತ್ತು ಚೋಬಾ ಪಟ್ಟಣಗಳಿಂದ ರಥಗಳನ್ನು ಮತ್ತು ರಾಹುತರನ್ನು ಕೊಂಡುಕೊಂಡನು.


ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.


ಅಮ್ಮೋನಿಯರು ಹೊರಗೆ ಬಂದು ಯುದ್ಧಕ್ಕೆ ಸಿದ್ಧರಾದರು. ಅವರು ನಗರದ ಬಾಗಿಲಿನಲ್ಲಿ ನಿಂತರು. ಚೋಬಾ ಮತ್ತು ರೆಹೋಬ್‌ಗಳ ಅರಾಮ್ಯರು, ಟೋಬ್ ಮತ್ತು ಮಾಕಾದ ಜನರು ಯುದ್ಧರಂಗದಲ್ಲಿ ಅಮ್ಮೋನಿಯರ ಜೊತೆಯಲ್ಲಿ ಒಟ್ಟಾಗಿ ನಿಲ್ಲಲಿಲ್ಲ.


ಚೋಬದ ರಾಜನಾದ ಹದದೆಜೆರನ ಸಹಾಯಕ್ಕೆ ದಮಸ್ಕದ ಅರಾಮ್ಯರು ಬಂದರು. ಆದರೆ ದಾವೀದನು ಆ ಇಪ್ಪತ್ತೆರಡು ಸಾವಿರ ಅರಾಮ್ಯರನ್ನು ಸಂಹರಿಸಿದನು.


ಆದರೆ ಫರೋಹನು “ನಿನಗೆ ಬೇಕಾದುದ್ದೆಲ್ಲವನ್ನು ನಾನು ಇಲ್ಲಿ ನಿನಗೆ ಕೊಟ್ಟಿದ್ದೇನೆ! ನೀನು ಸ್ವದೇಶಕ್ಕೆ ಹಿಂದಿರುಗಿ ಹೋಗಲು ಅಪೇಕ್ಷಿಸುತ್ತಿರುವುದಾದರೂ ಏಕೆ?” ಎಂದು ಕೇಳಿದನು. ಹದದನು, “ದಯವಿಟ್ಟು ನನ್ನ ಮನೆಗೆ ನಾನು ಹೋಗಲು ಬಿಡು” ಎಂದನು.


ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.


ಹದದೆಜೆರನಿಗೆ ಸೇರಿದ ನಗರಗಳಾದ ಬೆಟಹ ಮತ್ತು ಬೇರೋತೈಗಳಿಂದ ಹಿತ್ತಾಳೆಯ ಅನೇಕಾನೇಕ ವಸ್ತುಗಳನ್ನು ದಾವೀದನು ವಶಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು