Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:28 - ಪರಿಶುದ್ದ ಬೈಬಲ್‌

28 ಯಾರೊಬ್ಬಾಮನು ಸಮರ್ಥನಾದ ಮನುಷ್ಯನಾಗಿದ್ದನು. ಈ ಯುವಕನು ಒಳ್ಳೆಯ ಕೆಲಸಗಾರನೆಂಬುದು ಸೊಲೊಮೋನನಿಗೆ ತಿಳಿಯಿತು. ಆದ್ದರಿಂದ ಸೊಲೊಮೋನನು ಯೋಸೇಫ್ ಕುಲದ ಕೆಲಸಗಾರರೆಲ್ಲರಿಗೂ ಮೇಲ್ವಿಚಾರಕನನ್ನಾಗಿ ಅವನನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೌವನಸ್ಥನಾದ ಯಾರೊಬ್ಬಾಮನು ಬಹು ಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಜೋಸೆಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯಾರೊಬ್ಬಾಮನು ಪರಾಕ್ರಮಶಾಲಿಯಾಗಿರುವುದರಿಂದ ಸೊಲೊಮೋನನು ಈ ಪ್ರಾಯಸ್ಥನು ಕೆಲಸಮಾಡತಕ್ಕವನೆಂದು ಕಂಡು, ಯೋಸೇಫನ ಗೋತ್ರದ ಸಮಸ್ತ ಆಳುಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:28
13 ತಿಳಿವುಗಳ ಹೋಲಿಕೆ  

ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.


ಹೌದು, ನಿಮಗೆ ನನ್ನ ನೊಗವು ಮೃದುವಾಗಿದೆ; ನನ್ನ ಹೊರೆಯು ಹಗುರವಾಗಿದೆ.”


ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರೆದುಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.


ಯೆಹೋವನ ಬಳಿಗೆ ಹೋಗು. ಆಗ ಜೀವಿಸುವೆ. ಯೆಹೋವನ ಬಳಿಗೆ ನೀನು ಹೋಗದಿದ್ದಲ್ಲಿ ಯೋಸೇಫನ ಮನೆತನಕ್ಕೆ ಬೆಂಕಿಯು ಹಿಡಿಯುವುದು. ಆ ಬೆಂಕಿಯು ಯೋಸೇಫನ ಮನೆಯನ್ನು ದಹಿಸುವದು. ಬೇತೇಲಿನಲ್ಲಿ ಅದನ್ನು ಯಾರೂ ನಂದಿಸಲಾರರು.


ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.


ಅಲ್ಲಿ ಕೆಲಸ ಮಾಡುವ ಜನರ ಮೇಲ್ವಿಚಾರಕರಾಗಿ ಮೂರು ಸಾವಿರದ ಮುನ್ನೂರು ಜನರಿದ್ದರು.


ನಾನು ಪಾಪಮಾಡಿದ್ದೇನೆಂದು ಒಪ್ಪಿಕೊಳ್ಳುತ್ತೇನೆ. ಆದ ಕಾರಣವೇ, ನನ್ನ ರಾಜನಾದ ಒಡೆಯನೇ, ನಿನ್ನನ್ನು ಭೇಟಿಮಾಡಲು ಬಂದ ಯೋಸೇಫ್ಯರ ಕುಲದಲ್ಲಿ ನಾನೇ ಮೊದಲಿಗನು” ಎಂದು ಹೇಳಿದನು.


ಅವರು ಆ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಲಿ. ಯೆಹೂದದ ಜನರು ದಕ್ಷಿಣದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ. ಯೋಸೇಫನ ಜನರು ಉತ್ತರದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ.


ಆದರೆ ನಾನೇ ಸ್ವತಃ ನಿಮ್ಮನ್ನು ಪರಾಂಬರಿಸುವುದಕ್ಕಾಗಲಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಲಿ ಸಾಧ್ಯವಾಗಲಿಲ್ಲ.


ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು.


ಸೊಲೊಮೋನನ ಸೇವಕರಲ್ಲಿ ನೆಬಾಟನ ಮಗನಾದ ಯಾರೊಬ್ಬಾಮನೂ ಒಬ್ಬನಾಗಿದ್ದನು. ಯಾರೊಬ್ಬಾಮನು ಎಫ್ರಾಯೀಮ್ ಕುಲದವನು, ಅವನು ಚರೇದ ಪಟ್ಟಣದವನು. ಯಾರೊಬ್ಬಾಮನ ತಾಯಿಯ ಹೆಸರು ಜೆರೂಗ, ಆಕೆ ವಿಧವೆಯಾಗಿದ್ದಳು. ಯಾರೊಬ್ಬಾಮನು ರಾಜನ ವಿರುದ್ಧ ತಿರುಗಿಬಿದ್ದನು.


ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆಂದು ನೀನು ಹಿಂದಿರುಗಿ ಹೋಗಿ ಯಾರೊಬ್ಬಾಮನಿಗೆ ತಿಳಿಸು. ಯೆಹೋವನು ಹೀಗೆನ್ನುತ್ತಾನೆ: ‘ಯಾರೊಬ್ಬಾಮನೇ, ಇಸ್ರೇಲಿನ ಜನರಲ್ಲೆಲ್ಲಾ ನಾನು ನಿನ್ನನ್ನು ಆರಿಸಿಕೊಂಡೆ. ನನ್ನ ಜನರನ್ನು ಆಳಲು ನಾನು ನಿನ್ನನ್ನು ನೇಮಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು