Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:29 - ಪರಿಶುದ್ದ ಬೈಬಲ್‌

29 ಒಂದು ದಿನ ಯಾರೊಬ್ಬಾಮನು ಜೆರುಸಲೇಮಿನ ಹೊರಗೆ ಹೋಗುತ್ತಿದ್ದನು. ಶೀಲೋವಿನ ಪ್ರವಾದಿಯಾದ ಅಹೀಯನು ಅವನನ್ನು ರಸ್ತೆಯಲ್ಲಿ ಸಂಧಿಸಿದನು. ಅಹೀಯನು ಹೊಸ ಅಂಗಿಯನ್ನು ಧರಿಸಿದ್ದನು. ನಿರ್ಜನವಾಗಿದ್ದ ಆ ದೇಶದಲ್ಲಿ ಇವರಿಬ್ಬರೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಒಂದು ದಿವಸ ಯಾರೊಬ್ಬಾಮನು ಯೆರೂಸಲೇವಿುನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆ ಕಾಲದಲ್ಲಿ, ಯಾರೊಬ್ಬಾಮನು ಯೆರೂಸಲೇಮಿನೊಳಗಿಂದ ಹೊರಟು ಹೋಗುವಾಗ, ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿಯಲ್ಲಿ ಕಂಡನು. ಅವನು ಹೊಸ ಕಂಬಳಿಯನ್ನು ಹೊದ್ದುಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:29
10 ತಿಳಿವುಗಳ ಹೋಲಿಕೆ  

ಸೊಲೊಮೋನನು ಪ್ರಾರಂಭದಿಂದ ಅಂತ್ಯದ ತನಕ ಮಾಡಿದ ಎಲ್ಲಾ ವಿಷಯಗಳನ್ನು ಪ್ರವಾದಿಯಾದ ನಾತಾನನು ಬರೆದ ಲೇಖನಗಳಲ್ಲಿಯೂ, ಶೀಲೋವದ ಅಹೀಯನ ಪ್ರವಾದನೆಯಲ್ಲಿಯೂ ಮತ್ತು ದೇವದರ್ಶಿಯಾದ ಇದ್ದೋವಿನ ದರ್ಶನಗಳ ಪುಸ್ತಕದಲ್ಲಿಯೂ ಬರೆಯಲಾಗಿದೆ. ದೇವದರ್ಶಿಯಾದ ಇದ್ದೋ, ನೆಬಾಟನ ಮಗನಾದ ಯಾರೊಬ್ಬಾಮನ ವಿಷಯವಾಗಿಯೂ ಬರೆದಿದ್ದಾನೆ.


ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ.


ರಾಜನು ಜನರ ಅಪೇಕ್ಷೆಯನ್ನು ನೆರವೇರಿಸಲಿಲ್ಲ. ನೆಬಾಟನ ಮಗನಾದ ಯಾರೊಬ್ಬಾಮನಿಗೆ ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಲು ಯೆಹೋವನೇ ಹೀಗೆ ಮಾಡಿದನು. ಯೆಹೋವನು ಪ್ರವಾದಿಯಾದ ಅಹೀಯನ ಮೂಲಕ ಈ ವಾಗ್ದಾನವನ್ನು ಮಾಡಿದ್ದನು. ಅಹೀಯನು ಶೀಲೋವಿನವನು.


ನನಗೆ ಇಬ್ಬರು ಗಂಡುಮಕ್ಕಳಿದ್ದರು. ಈ ಇಬ್ಬರು ಗಂಡುಮಕ್ಕಳು ಜಗಳಮಾಡುತ್ತಾ ಹೊರಗೆ ಮೈದಾನದಲ್ಲಿದ್ದರು. ಅವರನ್ನು ತಡೆಯುವ ಬೇರೊಬ್ಬನು ಅಲ್ಲಿರಲಿಲ. ಒಬ್ಬ ಮಗನು ಮತ್ತೊಬ್ಬನನ್ನು ಕೊಂದನು.


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.


ಆದ್ದರಿಂದ ಯೆಹೋವನು ಸೊಲೊಮೋನನಿಗೆ, “ನಮ್ಮಿಬ್ಬರ ನಡುವೆಯಿದ್ದ ಒಡಂಬಡಿಕೆಯನ್ನು ಮೀರಿಬಿಟ್ಟೆ. ನೀನು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ಆದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕರಲ್ಲಿ ಒಬ್ಬನಿಗೆ ಅದನ್ನು ಕೊಡುವುದಾಗಿ ನಾನು ಪ್ರಮಾಣ ಮಾಡುತ್ತೇನೆ.


ರಾಜನ ಪತ್ನಿಯು ಅವನು ಹೇಳಿದಂತೆ ಮಾಡಿದಳು. ಅವಳು ಶೀಲೋವಿಗೆ ಹೋದಳು. ಅವಳು ಪ್ರವಾದಿಯಾದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ಬಹಳ ವಯಸ್ಸಾಗಿತ್ತು; ಅವನು ಕುರುಡನಾಗಿದ್ದನು.


ಹೀಗೆ ರೆಹಬ್ಬಾಮನು ಜನರ ಬೇಡಿಕೆಯನ್ನು ಕೇಳಲಿಲ್ಲ. ಯಾಕೆಂದರೆ ಇದು ದೇವರ ಚಿತ್ತವಾಗಿತ್ತು. ದೇವರು ಅಹೀಯನ ಮುಖಾಂತರ ಯಾರೊಬ್ಬಾಮನಿಗೆ ಹೇಳಿದ ಮಾತು ನೆರವೇರುವಂತೆ ಹೀಗಾಯಿತು. ಅಹೀಯನು ಶೀಲೋವಿನವನಾಗಿದ್ದನು. ಯಾರೊಬ್ಬಾಮನು ನೆಬಾಟನ ಮಗನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು