Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:32 - ಪರಿಶುದ್ದ ಬೈಬಲ್‌

32 ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತನ್ನ ಸೇವಕನಾದ ದಾವೀದನ ನಿವಿುತ್ತವಾಗಿಯೂ ತಾನು ಇಸ್ರಾಯೇಲ್ಯರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದ ನಿವಿುತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:32
6 ತಿಳಿವುಗಳ ಹೋಲಿಕೆ  

ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಒಬ್ಬ ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ಆ ನಗರವನ್ನು ಆರಿಸಿಕೊಂಡೆನು” ಎಂದು ಹೇಳಿದನು.


ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.


ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!


ಆದರೆ ನಿನ್ನ ತಂದೆಯಾದ ದಾವೀದನನ್ನು ನಾನು ಪ್ರೀತಿಸಿದ್ದರಿಂದ ನೀನು ಜೀವಂತವಾಗಿರುವಾಗಲೇ ನಿನ್ನ ರಾಜ್ಯವನ್ನು ನಿನ್ನಿಂದ ನಾನು ತೆಗೆದುಕೊಳ್ಳುವುದಿಲ್ಲ. ನಿನ್ನ ಮಗನು ರಾಜನಾಗುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಅದನ್ನು ಅವನಿಂದ ತೆಗೆದುಕೊಳ್ಳುತ್ತೇನೆ.


ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು