Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:36 - ಪರಿಶುದ್ದ ಬೈಬಲ್‌

36 ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್‍ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:36
25 ತಿಳಿವುಗಳ ಹೋಲಿಕೆ  

ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.


ಯೆಹೋವನು ದಾವೀದನನ್ನು ಪ್ರೀತಿಸಿದ್ದರಿಂದ ಅವನಿಗೋಸ್ಕರ ಅಬೀಯಾಮನಿಗೆ ಜೆರುಸಲೇಮಿನಲ್ಲಿ ರಾಜ್ಯವನ್ನು ದಯಪಾಲಿಸಿದನು; ಅವನಿಗೆ ಮಗನನ್ನು ಅನುಗ್ರಹಿಸಿದನು; ಜೆರುಸಲೇಮ್ ಸುರಕ್ಷಿತವಾಗಿರುವಂತೆ ಮಾಡಿದನು.


ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಒಬ್ಬ ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ಆ ನಗರವನ್ನು ಆರಿಸಿಕೊಂಡೆನು” ಎಂದು ಹೇಳಿದನು.


ಇಲ್ಲಿಯೇ ನಾನು ದಾವೀದನನ್ನು ಬಲಗೊಳಿಸುವೆನು. ನಾನು ಅಭಿಷೇಕಿಸಿದ ಅವನಿಗೆ ದೀಪವನ್ನು ಒದಗಿಸುವೆನು.


ಆದರೆ ಯೆಹೋವನು ದಾವೀದನೊಂದಿಗೆ ಮಾಡಿದ ಒಡಂಬಡಿಕೆಯ ನಿಮಿತ್ತ ಅವನನ್ನು ನಾಶಮಾಡಲಿಲ್ಲ. ಯೆಹೋವನು, “ದಾವೀದನ ಸಂತತಿಯವರ ಬೆಳಕು ಉರಿಯುತ್ತಲೇ ಇರುವದು” ಎಂದು ವಾಗ್ದಾನ ಮಾಡಿದ್ದನು.


ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.


ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು.


ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.


ಒಂದು ಕುಲವನ್ನು ಮಾತ್ರ ದಾವೀದನ ವಂಶದ ಅಧೀನದಲ್ಲಿ ಬಿಡುತ್ತೇನೆ. ಅವರು ಈ ಕುಲವನ್ನು ಉಳಿಸಿಕೊಳ್ಳಲು ನಾನು ಅವಕಾಶ ಮಾಡಿಕೊಡುತ್ತೇನೆ. ನನ್ನ ಸೇವಕನಾದ ದಾವೀದನಿಗಾಗಿ ಮತ್ತು ಜೆರುಸಲೇಮಿಗಾಗಿ ನಾನು ಇದನ್ನು ಮಾಡುತ್ತೇನೆ. ಇಸ್ರೇಲಿನ ಎಲ್ಲಾ ಕುಲಗಳಿಂದಲೂ ನಾನು ಜೆರುಸಲೇಮ್ ನಗರವನ್ನು ಆರಿಸಿಕೊಂಡಿದ್ದೇನೆ.


ಯೆಹೋವನು ಅವನಿಗೆ ಹೀಗೆ ಹೇಳಿದನು: “ನಿನ್ನ ಪ್ರಾರ್ಥನೆಯು ನನಗೆ ಕೇಳಿಸಿತು. ನಿನ್ನ ಬಿನ್ನಹಗಳನ್ನು ಆಲಿಸಿದೆನು. ಈ ಆಲಯವನ್ನು ನೀನು ಕಟ್ಟಿಸಿದೆ. ನಾನು ಅದನ್ನು ಪವಿತ್ರಸ್ಥಳವನ್ನಾಗಿ ಮಾಡಿದೆ. ಆದ್ದರಿಂದ ನಾನಿಲ್ಲಿ ಸದಾಕಾಲ ಸನ್ಮಾನಿಸಲ್ಪಡುವೆನು. ನನ್ನ ದೃಷ್ಟಿಯೂ ಮನಸ್ಸೂ ಸದಾ ಅದರ ಮೇಲಿರುತ್ತದೆ.


ದಯವಿಟ್ಟು ನನ್ನ ಕುಟುಂಬವನ್ನು ಆಶೀರ್ವದಿಸು. ಅದು ನಿನ್ನ ಸನ್ನಿಧಿಯಲ್ಲಿ ಎಂದೆಂದಿಗೂ ಮುಂದುವರಿಯಲಿ. ದೇವರಾದ ಯೆಹೋವನೇ, ಆಶ್ಚರ್ಯಕರವಾದ ವಾಗ್ದಾನಗಳನ್ನು ನೀನು ನನಗೆ ಮಾಡಿರುವೆ. ನಿನ್ನ ಆಶೀರ್ವಾದದಿಂದ ನನ್ನ ಕುಟುಂಬವು ಎಂದೆಂದಿಗೂ ಆಶೀರ್ವಾದವನ್ನು ಹೊಂದಲಿ” ಎಂದು ಪ್ರಾರ್ಥಿಸಿದನು.


ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”


ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕು ಕೊಟ್ಟು ನನ್ನ ಸುತ್ತಲಿನ ಅಂಧಕಾರವನ್ನು ಪ್ರಕಾಶಮಯವಾಗುವಂತೆ ಮಾಡುವನು.


ನಾನು ನಿನ್ನನ್ನು ಇಡೀ ಇಸ್ರೇಲಿಗೆ ರಾಜನನ್ನಾಗಿ ಮಾಡುತ್ತೇನೆ. ನೀನು ನಿನ್ನ ಇಷ್ಟಾನುಸಾರವಾಗಿ ಪ್ರತಿಯೊಂದರ ಮೇಲೆ ದೊರೆತನ ಮಾಡುವಂತೆ ಮಾಡುತ್ತೇನೆ.


ಆದರೆ ರೆಹಬ್ಬಾಮನು ಯೆಹೂದನಗರಗಳಲ್ಲಿ ವಾಸವಾಗಿದ್ದ ಇಸ್ರೇಲರನ್ನು ಆಳಿದನು.


ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ.


ನೀನು ಯೆಹೋವನಿಗೆ ವಿಧೇಯನಾದರೆ, ಆಗ ಯೆಹೋವನು ನನಗೆ ಮಾಡಿದ ವಾಗ್ದಾನವನ್ನು ಈಡೇರಿಸುವನು. ಯೆಹೋವನು ನನಗೆ ಈ ರೀತಿ ವಾಗ್ದಾನ ಮಾಡಿರುವನು: ‘ನಿನ್ನ ಮಕ್ಕಳು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನ್ನ ಆಜ್ಞೆಗಳಿಗೆ ವಿಧೇಯರಾಗಿ ಜೀವಿಸುವುದಾಗಿದ್ದರೆ, ನಿನ್ನ ವಂಶದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ಜನರನ್ನು ಆಳುವವನಾಗಿರುತ್ತಾನೆ.’”


‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದ್ದರಿಂದ ಈ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಈ ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.


ರಾಜನಾದ ರೆಹಬ್ಬಾಮನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡು ಬಲಗೊಂಡನು. ಅವನು ಪಟ್ಟಕ್ಕೆ ಬಂದಾಗ ನಲವತ್ತೊಂದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಯೆಹೋವನು ತಾನೇ ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಜೆರುಸಲೇಮನ್ನು ಆರಿಸಿಕೊಂಡಿದ್ದನು. ರೆಹಬ್ಬಾಮನ ತಾಯಿಯ ಹೆಸರು ನಯಮಾ. ಆಕೆ ಅಮ್ಮೋನ್ ದೇಶದವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು