Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 11:39 - ಪರಿಶುದ್ದ ಬೈಬಲ್‌

39 ಸೊಲೊಮೋನನು ಮಾಡಿದ ಕಾರ್ಯಗಳ ನಿಮಿತ್ತ ನಾನು ದಾವೀದನ ಮಕ್ಕಳನ್ನು ದಂಡಿಸುತ್ತೇನೆ. ಆದರೆ ನನ್ನ ದಂಡನೆಯು ಅವರ ಮೇಲೆ ಶಾಶ್ವತವಾಗಿರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆ ತಗ್ಗಿಸುವಂತೆ ಮಾಡುವೆನು. ಆದರೆ ಸದಾಕಾಲಕ್ಕೂ ಅಲ್ಲ, ಎಂದು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ದಾವೀದನ ಸಂತಾನದವರನ್ನು ಅವರ ಪಾಪದ ದೆಸೆಯಿಂದ ಕುಗ್ಗಿಸುವೆನು; ಆದರೆ ಸದಾಕಾಲವು ಅಲ್ಲ ಎಂದು ಹೇಳಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು, ಆದರೆ ನಿರಂತರವಾಗಿ ಅಲ್ಲ,’ ” ಎಂದು ಅಹೀಯನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 11:39
18 ತಿಳಿವುಗಳ ಹೋಲಿಕೆ  

ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.


ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.


ನನ್ನ ಒಡೆಯನಾದ ದೇವರು ನಿಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ದಾವೀದನ ಕುಲವು ಇಸ್ರೇಲ್ ರಾಜ್ಯವನ್ನು ಆಳುತ್ತಿತ್ತು. ಆದರೆ ನಾನು ಅವರಿಂದ ರಾಜ್ಯವನ್ನು ತೆಗೆದುಕೊಂಡು, ನಿನಗೆ ಅದನ್ನು ಕೊಟ್ಟೆ. ಆದರೆ ನೀನು ನನ್ನ ಸೇವಕನಾದ ದಾವೀದನಂತಲ್ಲ. ಅವನು ನನ್ನ ಆಜ್ಞೆಗಳಿಗೆ ಯಾವಾಗಲೂ ವಿಧೇಯನಾಗಿದ್ದನು. ಅವನು ಪೂರ್ಣಮನಸ್ಸಿನಿಂದ ನನ್ನನ್ನು ಅನುಸರಿಸುತ್ತಿದ್ದನು. ನಾನು ಒಪ್ಪಿಕೊಳ್ಳುವ ಸಂಗತಿಗಳನ್ನು ಮಾತ್ರ ಅವನು ಮಾಡಿದನು.


ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದ್ದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.


ಸೊಲೊಮೋನನ ಮಗನಿಗೆ ಒಂದು ಕುಲವನ್ನು ಮಾತ್ರ ಕೊಡುತ್ತೇನೆ. ಜೆರುಸಲೇಮಿನ ನನ್ನ ಸನ್ನಿಧಿಯಲ್ಲಿ ಆಳಲು ನನ್ನ ಸೇವಕನಾದ ದಾವೀದನು ಯಾವಾಗಲೂ ತನ್ನ ಸಂತತಿಯವರಲ್ಲಿ ಒಬ್ಬನನ್ನು ಹೊಂದಿರಲೆಂದು ನಾನು ಇದನ್ನು ಮಾಡುತ್ತೇನೆ. ಜೆರುಸಲೇಮ್ ನಗರವನ್ನು ನಾನು ನನ್ನ ಸ್ವಂತದ್ದೆಂದು ಆರಿಸಿಕೊಂಡೆನು.


ನೀನು ಸರಿಯಾದ ಮಾರ್ಗದಲ್ಲಿ ಜೀವಿಸುತ್ತಾ, ನನ್ನ ಆಜ್ಞೆಗಳನ್ನು ಅನುಸರಿಸಿದರೆ, ನಾನು ಈ ಕಾರ್ಯಗಳೆನ್ನೆಲ್ಲ ನಿನಗೆ ಮಾಡುವೆನು. ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ದಾವೀದನಂತೆ ಅನುಸರಿಸಿದರೆ ನಾನು ನಿನ್ನೊಂದಿಗೆ ಇರುತ್ತೇನೆ. ನಾನು ನಿನ್ನ ಕುಟುಂಬವನ್ನು ದಾವೀದನ ಕುಟುಂಬದಂತೆ ರಾಜರುಗಳ ಕುಟುಂಬವನ್ನಾಗಿ ಮಾಡುತ್ತೇನೆ. ನಾನು ನಿನಗೆ ಇಸ್ರೇಲನ್ನು ಕೊಡುತ್ತೇನೆ.


ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಪ್ರಯತ್ನಿಸಿದನು. ಆದರೆ ಯಾರೊಬ್ಬಾಮನು ಈಜಿಪ್ಟಿಗೆ ಓಡಿಹೋದನು. ಅವನು ಈಜಿಪ್ಟಿನ ರಾಜನಾದ ಶೀಶಕನ ಬಳಿಗೆ ಹೋದನು. ಸೊಲೊಮೋನನು ಸಾಯುವವರೆಗೆ ಯಾರೊಬ್ಬಾಮನು ಅಲ್ಲಿಯೇ ನೆಲೆಸಿದನು.


ನಾವೆಲ್ಲ ಎಂದಾದರೂ ಒಂದು ದಿನ ಸಾಯುತ್ತೇವೆ ಎನ್ನುವುದು ನಿಜ. ನಾವೆಲ್ಲ ನೆಲದ ಮೇಲೆ ಚೆಲ್ಲಿದ ನೀರಿನಂತಿದ್ದೇವೆ. ಈ ನೀರನ್ನು ನೆಲದಿಂದ ಮತ್ತೆ ಒಟ್ಟುಗೂಡಿಸುವುದು ಯಾವ ವ್ಯಕ್ತಿಯಿಂದಲೂ ಸಾಧ್ಯವಿಲ್ಲ. ಆದರೆ ಜೀವವನ್ನು ತೆಗೆದುಬಿಡಲು ದೇವರು ಇಚ್ಛಿಸುವುದಿಲ್ಲ. ಬಲಾತ್ಕಾರವಾಗಿ ಹೊರಗೆ ನೂಕಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನದೇ ಆದ ಉಪಾಯವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು