Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 12:1 - ಪರಿಶುದ್ದ ಬೈಬಲ್‌

1-2 ಸೊಲೊಮೋನನಿಂದ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನೂ ಈಜಿಪ್ಟಿನಲ್ಲಿಯೇ ಇದ್ದನು. ಸೊಲೊಮೋನನು ಸತ್ತುಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು. ರಾಜನಾದ ಸೊಲೊಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗನಾದ ರೆಹಬ್ಬಾಮನು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಇಸ್ರಯೇಲರೆಲ್ಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ರೆಹಬ್ಬಾಮನು ಶೆಕೆವಿುಗೆ ಹೋದನು; ಅಲ್ಲಿ ಎಲ್ಲಾ ಇಸ್ರಾಯೇಲ್ಯರೂ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಕೂಡಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 12:1
14 ತಿಳಿವುಗಳ ಹೋಲಿಕೆ  

ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.


ದೇವರು ತನ್ನ ಆಲಯದೊಳಗೆ ಹೀಗೆಂದನು: “ನಾನು ಅವರಿಗೆ ಶೆಕೆಮನ್ನು ಕೊಡುವೆನು; ಸುಕ್ಕೋತ್ ಕಣಿವೆಯನ್ನೂ ಅವರಿಗೆ ಕೊಡುವೆನು.


ಬಳಿಕ ಸೊಲೊಮೋನನು ಸತ್ತನು. ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನನ್ನು ಅವನ ತಂದೆಯಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಸೊಲೊಮೋನನ ಮಗನಾದ ರೆಹಬ್ಬಾಮನು ಸೊಲೊಮೋನನ ಬಳಿಕ ರಾಜನಾದನು.


ಅಬೀಮೆಲೆಕನು ಯೆರುಬ್ಬಾಳನ (ಗಿದ್ಯೋನನ) ಮಗನು. ಅಬೀಮೆಲೆಕನು ಶೆಕೆಮಿನಲ್ಲಿದ್ದ ತನ್ನ ಸೋದರ ಮಾವಂದಿರಲ್ಲಿಗೆ ಹೋದನು. ಅವನು ತನ್ನ ಸೋದರ ಮಾವಂದಿರಿಗೂ ತನ್ನ ತಾಯಿಯ ಕುಟುಂಬದವರೆಲ್ಲರಿಗೂ ಮತ್ತು


ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.


ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.


ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.


ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.


ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.


ರೆಹಬ್ಬಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಷ ಎಂಭತ್ತುಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು